29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

ಬೆಳ್ತಂಗಡಿ : ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋವ೯ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಹಾಗೂ ಇತರ ದಾಖಲೆಗಳನ್ನು ಪಡೆದು, ಬ್ಯಾಂಕ್ ಖಾತೆಯಿಂದ ರೂ. 8.40 ಲಕ್ಷ ಡ್ರಾ ಮಾಡಿ ವಂಚಿಸಿದ ಪ್ರಕರಣ ಪಡಂಗಡಿಯಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ನಿವಾಸಿ ನೀನಾ ರೋಡ್ರೀಗಸ್ ಎಂಬವರು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಘಟನೆ ಹಿನ್ನೆಲೆ : ‌ಆ. 1ರಂದು ಅಪರಿಚಿತ ನಂಬರ್ ನಿಂದ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಕರೆ ಮಾಡಿ ನಾವು ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡು 5% ಬಡ್ಡಿ ದರದಲ್ಲಿ ಲೋನ್ ಕೊಡುವುದಾಗಿಯೂ, ಲೋನ್ ಬೇಕಾದಲ್ಲಿ ಬ್ಯಾಂಕ್ ಹಾಗೂ ಇತರ ದಾಖಲಾತಿಗಳನ್ನು ನೀಡುವಂತೆ ತಿಳಿಸಿದಾಗ, ನೀನಾ ರೋಡ್ರೀಗಸ್ ಎಂಬವರು ಇದು ಸತ್ಯವಾಗಿರಬಹುದೆಂದು ನಂಬಿ ಒಪ್ಪಿಕೊಂಡು ಕರೆ ಬಂದ ನಂಬರ್ ಗೆ ಬ್ಯಾಂಕ್ ದಾಖಲೆ ಸೇರಿದಂತೆ ಇತರೆ ದಾಖಲೆಗಳನ್ನು ಕಳಿಸಿಕೊಟ್ಟಿರುದ್ದರು. ಬಳಿಕ ಅಪರಿಚಿತ ವ್ಯಕ್ತಿಯು ಲೋನ್ ಸಲುವಾಗಿ ಆ. 1 ರಿಂದ ಆ.17 ರವರೆಗೆ ಲೀನಾ ರೊಡ್ರಿಗಸ್ ಅವರ ಖಾತೆಗಳಿಂದ ಒಟ್ಟು 8,40,275/- ರೂ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಆನ್ ಲೈನ್ ಮುಖಾಂತರ ಹಾಕಿಸಿಕೊಂಡು ವಂಚಿಸಿರುವುದು ಬೆಳಕಿಗೆ ಬಂದಿದೆ.
ಅಪರಿಚಿತನಿಂದ ವಂಚನೆಗೆ ಒಳಗಾದ ಲೀನಾ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 77/2023 ಕಲಂ; 419 ,420 IPC 66(D) IT ACT ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya
error: Content is protected !!