24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

ಬೆಳ್ತಂಗಡಿ : ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋವ೯ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಹಾಗೂ ಇತರ ದಾಖಲೆಗಳನ್ನು ಪಡೆದು, ಬ್ಯಾಂಕ್ ಖಾತೆಯಿಂದ ರೂ. 8.40 ಲಕ್ಷ ಡ್ರಾ ಮಾಡಿ ವಂಚಿಸಿದ ಪ್ರಕರಣ ಪಡಂಗಡಿಯಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ನಿವಾಸಿ ನೀನಾ ರೋಡ್ರೀಗಸ್ ಎಂಬವರು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಘಟನೆ ಹಿನ್ನೆಲೆ : ‌ಆ. 1ರಂದು ಅಪರಿಚಿತ ನಂಬರ್ ನಿಂದ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಕರೆ ಮಾಡಿ ನಾವು ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡು 5% ಬಡ್ಡಿ ದರದಲ್ಲಿ ಲೋನ್ ಕೊಡುವುದಾಗಿಯೂ, ಲೋನ್ ಬೇಕಾದಲ್ಲಿ ಬ್ಯಾಂಕ್ ಹಾಗೂ ಇತರ ದಾಖಲಾತಿಗಳನ್ನು ನೀಡುವಂತೆ ತಿಳಿಸಿದಾಗ, ನೀನಾ ರೋಡ್ರೀಗಸ್ ಎಂಬವರು ಇದು ಸತ್ಯವಾಗಿರಬಹುದೆಂದು ನಂಬಿ ಒಪ್ಪಿಕೊಂಡು ಕರೆ ಬಂದ ನಂಬರ್ ಗೆ ಬ್ಯಾಂಕ್ ದಾಖಲೆ ಸೇರಿದಂತೆ ಇತರೆ ದಾಖಲೆಗಳನ್ನು ಕಳಿಸಿಕೊಟ್ಟಿರುದ್ದರು. ಬಳಿಕ ಅಪರಿಚಿತ ವ್ಯಕ್ತಿಯು ಲೋನ್ ಸಲುವಾಗಿ ಆ. 1 ರಿಂದ ಆ.17 ರವರೆಗೆ ಲೀನಾ ರೊಡ್ರಿಗಸ್ ಅವರ ಖಾತೆಗಳಿಂದ ಒಟ್ಟು 8,40,275/- ರೂ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಆನ್ ಲೈನ್ ಮುಖಾಂತರ ಹಾಕಿಸಿಕೊಂಡು ವಂಚಿಸಿರುವುದು ಬೆಳಕಿಗೆ ಬಂದಿದೆ.
ಅಪರಿಚಿತನಿಂದ ವಂಚನೆಗೆ ಒಳಗಾದ ಲೀನಾ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 77/2023 ಕಲಂ; 419 ,420 IPC 66(D) IT ACT ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿದ್ದು ಮಳೆಗಾಲ ಪ್ರಾರಂಭ ಮುನ್ನ ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಗೆ ಬ್ರಿಜೇಶ್ ಚೌಟ ಮನವಿ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya
error: Content is protected !!