23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

ಬೆಳ್ತಂಗಡಿ : ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋವ೯ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಹಾಗೂ ಇತರ ದಾಖಲೆಗಳನ್ನು ಪಡೆದು, ಬ್ಯಾಂಕ್ ಖಾತೆಯಿಂದ ರೂ. 8.40 ಲಕ್ಷ ಡ್ರಾ ಮಾಡಿ ವಂಚಿಸಿದ ಪ್ರಕರಣ ಪಡಂಗಡಿಯಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ನಿವಾಸಿ ನೀನಾ ರೋಡ್ರೀಗಸ್ ಎಂಬವರು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಘಟನೆ ಹಿನ್ನೆಲೆ : ‌ಆ. 1ರಂದು ಅಪರಿಚಿತ ನಂಬರ್ ನಿಂದ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಕರೆ ಮಾಡಿ ನಾವು ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡು 5% ಬಡ್ಡಿ ದರದಲ್ಲಿ ಲೋನ್ ಕೊಡುವುದಾಗಿಯೂ, ಲೋನ್ ಬೇಕಾದಲ್ಲಿ ಬ್ಯಾಂಕ್ ಹಾಗೂ ಇತರ ದಾಖಲಾತಿಗಳನ್ನು ನೀಡುವಂತೆ ತಿಳಿಸಿದಾಗ, ನೀನಾ ರೋಡ್ರೀಗಸ್ ಎಂಬವರು ಇದು ಸತ್ಯವಾಗಿರಬಹುದೆಂದು ನಂಬಿ ಒಪ್ಪಿಕೊಂಡು ಕರೆ ಬಂದ ನಂಬರ್ ಗೆ ಬ್ಯಾಂಕ್ ದಾಖಲೆ ಸೇರಿದಂತೆ ಇತರೆ ದಾಖಲೆಗಳನ್ನು ಕಳಿಸಿಕೊಟ್ಟಿರುದ್ದರು. ಬಳಿಕ ಅಪರಿಚಿತ ವ್ಯಕ್ತಿಯು ಲೋನ್ ಸಲುವಾಗಿ ಆ. 1 ರಿಂದ ಆ.17 ರವರೆಗೆ ಲೀನಾ ರೊಡ್ರಿಗಸ್ ಅವರ ಖಾತೆಗಳಿಂದ ಒಟ್ಟು 8,40,275/- ರೂ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಆನ್ ಲೈನ್ ಮುಖಾಂತರ ಹಾಕಿಸಿಕೊಂಡು ವಂಚಿಸಿರುವುದು ಬೆಳಕಿಗೆ ಬಂದಿದೆ.
ಅಪರಿಚಿತನಿಂದ ವಂಚನೆಗೆ ಒಳಗಾದ ಲೀನಾ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 77/2023 ಕಲಂ; 419 ,420 IPC 66(D) IT ACT ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya
error: Content is protected !!