24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

ಬೆಳ್ತಂಗಡಿ : ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋವ೯ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬ್ಯಾಂಕ್ ಹಾಗೂ ಇತರ ದಾಖಲೆಗಳನ್ನು ಪಡೆದು, ಬ್ಯಾಂಕ್ ಖಾತೆಯಿಂದ ರೂ. 8.40 ಲಕ್ಷ ಡ್ರಾ ಮಾಡಿ ವಂಚಿಸಿದ ಪ್ರಕರಣ ಪಡಂಗಡಿಯಲ್ಲಿ ನಡೆದಿದೆ.

ಪಡಂಗಡಿ ಗ್ರಾಮದ ನಿವಾಸಿ ನೀನಾ ರೋಡ್ರೀಗಸ್ ಎಂಬವರು ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಘಟನೆ ಹಿನ್ನೆಲೆ : ‌ಆ. 1ರಂದು ಅಪರಿಚಿತ ನಂಬರ್ ನಿಂದ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಕರೆ ಮಾಡಿ ನಾವು ರಿಲಾಯನ್ಸ್ ಪೈನಾನ್ಸ್ ನಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡು 5% ಬಡ್ಡಿ ದರದಲ್ಲಿ ಲೋನ್ ಕೊಡುವುದಾಗಿಯೂ, ಲೋನ್ ಬೇಕಾದಲ್ಲಿ ಬ್ಯಾಂಕ್ ಹಾಗೂ ಇತರ ದಾಖಲಾತಿಗಳನ್ನು ನೀಡುವಂತೆ ತಿಳಿಸಿದಾಗ, ನೀನಾ ರೋಡ್ರೀಗಸ್ ಎಂಬವರು ಇದು ಸತ್ಯವಾಗಿರಬಹುದೆಂದು ನಂಬಿ ಒಪ್ಪಿಕೊಂಡು ಕರೆ ಬಂದ ನಂಬರ್ ಗೆ ಬ್ಯಾಂಕ್ ದಾಖಲೆ ಸೇರಿದಂತೆ ಇತರೆ ದಾಖಲೆಗಳನ್ನು ಕಳಿಸಿಕೊಟ್ಟಿರುದ್ದರು. ಬಳಿಕ ಅಪರಿಚಿತ ವ್ಯಕ್ತಿಯು ಲೋನ್ ಸಲುವಾಗಿ ಆ. 1 ರಿಂದ ಆ.17 ರವರೆಗೆ ಲೀನಾ ರೊಡ್ರಿಗಸ್ ಅವರ ಖಾತೆಗಳಿಂದ ಒಟ್ಟು 8,40,275/- ರೂ ಹಣವನ್ನು ಬೇರೆ ಬೇರೆ ಖಾತೆಗಳಿಗೆ ಆನ್ ಲೈನ್ ಮುಖಾಂತರ ಹಾಕಿಸಿಕೊಂಡು ವಂಚಿಸಿರುವುದು ಬೆಳಕಿಗೆ ಬಂದಿದೆ.
ಅಪರಿಚಿತನಿಂದ ವಂಚನೆಗೆ ಒಳಗಾದ ಲೀನಾ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 77/2023 ಕಲಂ; 419 ,420 IPC 66(D) IT ACT ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಇಂದಬೆಟ್ಟು: ಇಬ್ರಾಹಿಂ ಹಾಗೂ ಮುಹಮ್ಮದ್ ಸಾಝಿನ್ ಸ್ಮರಣಾರ್ಥ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

Suddi Udaya

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರಸಂಕಿರಣ

Suddi Udaya

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya
error: Content is protected !!