24.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

ಗೇರುಕಟ್ಟೆ: ಆ.24ರಂದು ಬೆಳಗ್ಗಿನ ಜಾವ ಯಾರೋ ಅಕ್ರಮ ದನ ಸಾಗಾಟಗಾರರು ಕಳಿಯ ಗ್ರಾಮದ ಪರಪ್ಪು ಬಸ್ಸು ನಿಲ್ದಾಣದ ಸ್ವಲ್ಪ ಮುಂದೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಬದಿಯಲ್ಲಿ ಸಾಗಾಟ ಮಾಡುವಾಗ ಸತ್ತುಹೋಗಿದ್ದ ದನವನ್ನು ಎಸೆದು ಹೋದ ಘಟನೆ ವರದಿಯಾಗಿದೆ.


ಈ ಪ್ರದೇಶದಲ್ಲಿ ಅಕ್ರಮ ದನ ಸಾಗಾಟವು ವ್ಯಾಪಕವಾಗಿ ನಡೆಯುತ್ತಿದೆಯೆಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಪೋಲಿಸ್ ಇಲಾಖೆಯು ಕೂಡಲೇ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ವಹಿಸುವಂತೆ ಹಾಗೂ ಅವ್ಯಾಹತವಾಗಿ ಅಕ್ರಮ ದನ ಸಾಗಾಟ ಮಾಡುತ್ತಿರುವವರನ್ನು ತಡೆಗಟ್ಟುವಂತೆ ಆಗ್ರಹಿಸುತ್ತಿದ್ದಾರೆ.


ವಿಷಯ ತಿಳಿದ ಬೆಳ್ತಂಗಡಿ ಠಾಣಾ ಉಪನಿರೀಕ್ಷಕರಾದ ಧನರಾಜ್ ಮಾರ್ಗದರ್ಶನದಂತೆ ಕಳಿಯ ಬೀಟ್ ಪೊಲೀಸರಾದ ಚರಣ್ ಕೂಡಲೇ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ, ಮರೀಟಾ ಪಿಂಟೋ ಮತ್ತು ಸಾರ್ವಜನಿಕರು ಸ್ಥಳ ಪರಿಶೀಲನೆ ಮಾಡಿದರು.

Related posts

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya
error: Content is protected !!