23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

ಗೇರುಕಟ್ಟೆ: ಆ.24ರಂದು ಬೆಳಗ್ಗಿನ ಜಾವ ಯಾರೋ ಅಕ್ರಮ ದನ ಸಾಗಾಟಗಾರರು ಕಳಿಯ ಗ್ರಾಮದ ಪರಪ್ಪು ಬಸ್ಸು ನಿಲ್ದಾಣದ ಸ್ವಲ್ಪ ಮುಂದೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಬದಿಯಲ್ಲಿ ಸಾಗಾಟ ಮಾಡುವಾಗ ಸತ್ತುಹೋಗಿದ್ದ ದನವನ್ನು ಎಸೆದು ಹೋದ ಘಟನೆ ವರದಿಯಾಗಿದೆ.


ಈ ಪ್ರದೇಶದಲ್ಲಿ ಅಕ್ರಮ ದನ ಸಾಗಾಟವು ವ್ಯಾಪಕವಾಗಿ ನಡೆಯುತ್ತಿದೆಯೆಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಪೋಲಿಸ್ ಇಲಾಖೆಯು ಕೂಡಲೇ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ವಹಿಸುವಂತೆ ಹಾಗೂ ಅವ್ಯಾಹತವಾಗಿ ಅಕ್ರಮ ದನ ಸಾಗಾಟ ಮಾಡುತ್ತಿರುವವರನ್ನು ತಡೆಗಟ್ಟುವಂತೆ ಆಗ್ರಹಿಸುತ್ತಿದ್ದಾರೆ.


ವಿಷಯ ತಿಳಿದ ಬೆಳ್ತಂಗಡಿ ಠಾಣಾ ಉಪನಿರೀಕ್ಷಕರಾದ ಧನರಾಜ್ ಮಾರ್ಗದರ್ಶನದಂತೆ ಕಳಿಯ ಬೀಟ್ ಪೊಲೀಸರಾದ ಚರಣ್ ಕೂಡಲೇ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ, ಮರೀಟಾ ಪಿಂಟೋ ಮತ್ತು ಸಾರ್ವಜನಿಕರು ಸ್ಥಳ ಪರಿಶೀಲನೆ ಮಾಡಿದರು.

Related posts

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya
error: Content is protected !!