25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

ಗೇರುಕಟ್ಟೆ: ಆ.24ರಂದು ಬೆಳಗ್ಗಿನ ಜಾವ ಯಾರೋ ಅಕ್ರಮ ದನ ಸಾಗಾಟಗಾರರು ಕಳಿಯ ಗ್ರಾಮದ ಪರಪ್ಪು ಬಸ್ಸು ನಿಲ್ದಾಣದ ಸ್ವಲ್ಪ ಮುಂದೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಬದಿಯಲ್ಲಿ ಸಾಗಾಟ ಮಾಡುವಾಗ ಸತ್ತುಹೋಗಿದ್ದ ದನವನ್ನು ಎಸೆದು ಹೋದ ಘಟನೆ ವರದಿಯಾಗಿದೆ.


ಈ ಪ್ರದೇಶದಲ್ಲಿ ಅಕ್ರಮ ದನ ಸಾಗಾಟವು ವ್ಯಾಪಕವಾಗಿ ನಡೆಯುತ್ತಿದೆಯೆಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಪೋಲಿಸ್ ಇಲಾಖೆಯು ಕೂಡಲೇ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ವಹಿಸುವಂತೆ ಹಾಗೂ ಅವ್ಯಾಹತವಾಗಿ ಅಕ್ರಮ ದನ ಸಾಗಾಟ ಮಾಡುತ್ತಿರುವವರನ್ನು ತಡೆಗಟ್ಟುವಂತೆ ಆಗ್ರಹಿಸುತ್ತಿದ್ದಾರೆ.


ವಿಷಯ ತಿಳಿದ ಬೆಳ್ತಂಗಡಿ ಠಾಣಾ ಉಪನಿರೀಕ್ಷಕರಾದ ಧನರಾಜ್ ಮಾರ್ಗದರ್ಶನದಂತೆ ಕಳಿಯ ಬೀಟ್ ಪೊಲೀಸರಾದ ಚರಣ್ ಕೂಡಲೇ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ, ಮರೀಟಾ ಪಿಂಟೋ ಮತ್ತು ಸಾರ್ವಜನಿಕರು ಸ್ಥಳ ಪರಿಶೀಲನೆ ಮಾಡಿದರು.

Related posts

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಪುತ್ತೂರಿನ ಮುರದಲ್ಲಿ ರೈಲು ಡಿಕ್ಕಿಯಾಗಿ ಮೃತಪಟ್ಟ ವ್ಯಕ್ತಿ: ನ್ಯಾಯತರ್ಪು ಪಾಂಡಿಬೆಟ್ಟು ನಿವಾಸಿ ಶಿವರಾಮ ಗೌಡ ಎಂದು ಗುರುತು ಪತ್ತೆ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya
error: Content is protected !!