25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

ಗೇರುಕಟ್ಟೆ: ಆ.24ರಂದು ಬೆಳಗ್ಗಿನ ಜಾವ ಯಾರೋ ಅಕ್ರಮ ದನ ಸಾಗಾಟಗಾರರು ಕಳಿಯ ಗ್ರಾಮದ ಪರಪ್ಪು ಬಸ್ಸು ನಿಲ್ದಾಣದ ಸ್ವಲ್ಪ ಮುಂದೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಬದಿಯಲ್ಲಿ ಸಾಗಾಟ ಮಾಡುವಾಗ ಸತ್ತುಹೋಗಿದ್ದ ದನವನ್ನು ಎಸೆದು ಹೋದ ಘಟನೆ ವರದಿಯಾಗಿದೆ.


ಈ ಪ್ರದೇಶದಲ್ಲಿ ಅಕ್ರಮ ದನ ಸಾಗಾಟವು ವ್ಯಾಪಕವಾಗಿ ನಡೆಯುತ್ತಿದೆಯೆಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಪೋಲಿಸ್ ಇಲಾಖೆಯು ಕೂಡಲೇ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ವಹಿಸುವಂತೆ ಹಾಗೂ ಅವ್ಯಾಹತವಾಗಿ ಅಕ್ರಮ ದನ ಸಾಗಾಟ ಮಾಡುತ್ತಿರುವವರನ್ನು ತಡೆಗಟ್ಟುವಂತೆ ಆಗ್ರಹಿಸುತ್ತಿದ್ದಾರೆ.


ವಿಷಯ ತಿಳಿದ ಬೆಳ್ತಂಗಡಿ ಠಾಣಾ ಉಪನಿರೀಕ್ಷಕರಾದ ಧನರಾಜ್ ಮಾರ್ಗದರ್ಶನದಂತೆ ಕಳಿಯ ಬೀಟ್ ಪೊಲೀಸರಾದ ಚರಣ್ ಕೂಡಲೇ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ, ಮರೀಟಾ ಪಿಂಟೋ ಮತ್ತು ಸಾರ್ವಜನಿಕರು ಸ್ಥಳ ಪರಿಶೀಲನೆ ಮಾಡಿದರು.

Related posts

ಬಳಂಜ ಶಾಲೆಯಲ್ಲಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಚಿಣ್ಣರ ಅಂಗಳಕ್ಕೆ ಶಿಲಾನ್ಯಾಸ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

Suddi Udaya
error: Content is protected !!