23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

ಗೇರುಕಟ್ಟೆ: ಆ.24ರಂದು ಬೆಳಗ್ಗಿನ ಜಾವ ಯಾರೋ ಅಕ್ರಮ ದನ ಸಾಗಾಟಗಾರರು ಕಳಿಯ ಗ್ರಾಮದ ಪರಪ್ಪು ಬಸ್ಸು ನಿಲ್ದಾಣದ ಸ್ವಲ್ಪ ಮುಂದೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಬದಿಯಲ್ಲಿ ಸಾಗಾಟ ಮಾಡುವಾಗ ಸತ್ತುಹೋಗಿದ್ದ ದನವನ್ನು ಎಸೆದು ಹೋದ ಘಟನೆ ವರದಿಯಾಗಿದೆ.


ಈ ಪ್ರದೇಶದಲ್ಲಿ ಅಕ್ರಮ ದನ ಸಾಗಾಟವು ವ್ಯಾಪಕವಾಗಿ ನಡೆಯುತ್ತಿದೆಯೆಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಪೋಲಿಸ್ ಇಲಾಖೆಯು ಕೂಡಲೇ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ವಹಿಸುವಂತೆ ಹಾಗೂ ಅವ್ಯಾಹತವಾಗಿ ಅಕ್ರಮ ದನ ಸಾಗಾಟ ಮಾಡುತ್ತಿರುವವರನ್ನು ತಡೆಗಟ್ಟುವಂತೆ ಆಗ್ರಹಿಸುತ್ತಿದ್ದಾರೆ.


ವಿಷಯ ತಿಳಿದ ಬೆಳ್ತಂಗಡಿ ಠಾಣಾ ಉಪನಿರೀಕ್ಷಕರಾದ ಧನರಾಜ್ ಮಾರ್ಗದರ್ಶನದಂತೆ ಕಳಿಯ ಬೀಟ್ ಪೊಲೀಸರಾದ ಚರಣ್ ಕೂಡಲೇ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ, ಮರೀಟಾ ಪಿಂಟೋ ಮತ್ತು ಸಾರ್ವಜನಿಕರು ಸ್ಥಳ ಪರಿಶೀಲನೆ ಮಾಡಿದರು.

Related posts

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಡಿ 19:ಬೆಳ್ತಂಗಡಿ ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನ ಆಚರಣೆ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಮೈರೋಳ್ತಡ್ಕ ಸ. ಉ. ಹಿ.ಪ್ರಾ.ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿ ರಚನೆ

Suddi Udaya
error: Content is protected !!