April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ಎನ್‌.ಎಸ್‌.ಎಸ್. ಘಟಕ ಮತ್ತು ಲಾಯಿಲ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಕೇಂದ್ರ ಸರಕಾರದ ಘೋಷಣೆಯಂತೆ ನನ್ನ ಮಣ್ಣು ನನ್ನ ದೇಶ ಆಚರಣೆ ಪಟ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

‘ವಸುಧ ವಂದನ್’ ಎಂಬ ಪರಿಕಲ್ಪನೆಯಂತೆ ಕೋಟಿ ವೃಕ್ಷ ಅಭಿಯಾನದ ನಿಮಿತ್ತ ಶಾಲಾ ಪರಿಸರದಲ್ಲಿ ಸುಮಾರು 50 ಗಿಡಗಳನ್ನು ನೆಡಲಾಯಿತು.

ಎನ್.ಎಸ್‌.ಎಸ್‌ ವಿದ್ಯಾರ್ಥಿಗಳು ಹಾಗೂ ಕಾರ್ಯಕ್ರಮಾಧಿಕಾರಿ ಶಂಕರ ರಾವ್, ಬಿ. ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶ್ರೀಮತಿ ಜಯಂತಿ ಎಂ.ಕೆ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಾಜೇಶ್ವರಿ, ಶಿಕ್ಷಕರಾದ ಯೋಗೀಶ್ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರೀತಾ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸೂರಪ್ಪ ಉಪಸ್ಥಿತರಿದ್ದರು.

ಪಂಚಾಯತ್‌ ಸದಸ್ಯರಾದ ಆಶಾಲತಾ ಪ್ರಶಾಂತ್, ಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya
error: Content is protected !!