23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಚಂದ್ರ‍ಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ನಾನು ಕೂಡಾ ಅತ್ಯಂತ ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಸಂತಸ ಹಾಗೂ ಅಚ್ಚರಿ ಪಟ್ಟಿದ್ದೇನೆ. ಈ ಅದ್ಭುತ ಯಶಸ್ಸಿಗೆ ಭಗೀರಥ ಪ್ರಯತ್ನ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳೆಲ್ಲರನ್ನೂ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಇದೊಂದು ವಿಶ್ವದಾಖಲೆಯಾಗಿದ್ದು ಭಾರತದ ಕೀರ್ತಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಹೆಚ್ಚಾಗಿದೆ.

ಚಂದ್ರನನ್ನು ಈ ಸಂಭ್ರಮ – ಸಡಗರದ ಸಂದರ್ಭದಲ್ಲಿ ಸ್ಮರಿಸಿ ದೂರದಿಂದಲೇ ಪರಿಚಯವಾದ ಚಂದ್ರನನ್ನು ಅತೀ ಸಮೀಪಕ್ಕೆ ತಂದ ಎಲ್ಲಾ ಬಾಹ್ಯಾಕಾಶ ವಿಜ್ಞಾನಿಗಳನ್ನು ಮತ್ತು ತಂತ್ರಜ್ಞರನ್ನು ನಮ್ಮ ದೇಶದ ಎಲ್ಲಾ ಪ್ರಜೆಗಳ ಪರವಾಗಿ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ.

ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸುತ್ತಾ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮುಂದೆ ಇನ್ನೂ ಹೆಚ್ಚಿನ ಸೇವೆ – ಸಾಧನೆ ಮಾಡಿ ಯಶಸ್ಸನ್ನು ಪಡೆಯುವಂತೆ ಶ್ರೀ ಮಂಜುನಾಥ ಸ್ವಾಮಿ ಹಾಗೂ ಧರ್ಮದೇವತೆಗಳು ಅನುಗ್ರಹಿಸಲಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

Related posts

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!