September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಚಂದ್ರ‍ಯಾನದ ಸರಣಿಯ ಮೂರನೇ ಯಾನದ ವಿಕ್ರಮ್ ಚಂದ್ರನ ಅಂಗಳಕ್ಕೆ ಇಂದು ಬುಧವಾರ ಕಾಲಿಡುವ ಅಂತಿಮ ರೋಚಕ ಕ್ಷಣಗಳನ್ನು ನಾನು ಕೂಡಾ ಅತ್ಯಂತ ಕುತೂಹಲ ಮತ್ತು ಆಸಕ್ತಿಯಿಂದ ವೀಕ್ಷಿಸಿ ಸಂತಸ ಹಾಗೂ ಅಚ್ಚರಿ ಪಟ್ಟಿದ್ದೇನೆ. ಈ ಅದ್ಭುತ ಯಶಸ್ಸಿಗೆ ಭಗೀರಥ ಪ್ರಯತ್ನ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳೆಲ್ಲರನ್ನೂ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಇದೊಂದು ವಿಶ್ವದಾಖಲೆಯಾಗಿದ್ದು ಭಾರತದ ಕೀರ್ತಿ ಜಾಗತಿಕ ಮಟ್ಟದಲ್ಲಿ ಇನ್ನಷ್ಟು ಹೆಚ್ಚಾಗಿದೆ.

ಚಂದ್ರನನ್ನು ಈ ಸಂಭ್ರಮ – ಸಡಗರದ ಸಂದರ್ಭದಲ್ಲಿ ಸ್ಮರಿಸಿ ದೂರದಿಂದಲೇ ಪರಿಚಯವಾದ ಚಂದ್ರನನ್ನು ಅತೀ ಸಮೀಪಕ್ಕೆ ತಂದ ಎಲ್ಲಾ ಬಾಹ್ಯಾಕಾಶ ವಿಜ್ಞಾನಿಗಳನ್ನು ಮತ್ತು ತಂತ್ರಜ್ಞರನ್ನು ನಮ್ಮ ದೇಶದ ಎಲ್ಲಾ ಪ್ರಜೆಗಳ ಪರವಾಗಿ ನಾನು ಹಾರ್ದಿಕವಾಗಿ ಅಭಿನಂದಿಸುತ್ತೇನೆ.

ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಹಾರೈಸುತ್ತಾ, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮುಂದೆ ಇನ್ನೂ ಹೆಚ್ಚಿನ ಸೇವೆ – ಸಾಧನೆ ಮಾಡಿ ಯಶಸ್ಸನ್ನು ಪಡೆಯುವಂತೆ ಶ್ರೀ ಮಂಜುನಾಥ ಸ್ವಾಮಿ ಹಾಗೂ ಧರ್ಮದೇವತೆಗಳು ಅನುಗ್ರಹಿಸಲಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-ಸನ್ಮಾನ- ರೂ.577.80 ಕೋಟಿ ವ್ಯವಹಾರ ನಡೆಸಿ,ರೂ.2.03 ಕೋಟಿ ಲಾಭ ಗಳಿಸಿದೆ,ಸದಸ್ಯರಿಗೆ ಶೇ 15 ನೀಡಲಾಗುವುದು: ಜೋಯೆಲ್ ಮೆಂಡೋನ್ಸ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya
error: Content is protected !!