23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

ಬೆಳ್ತಂಗಡಿ : ಕಳೆದ ಕೆಲ ದಿನಗಳಿಂದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು ಇದನ್ನು ತಡೆಯಲು ಬೆಳ್ತಂಗಡಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಜಿರೆ ಬ್ಲಾಕ್ ಸಮಿತಿ ಅಧ್ಯಕ್ಷರಾದ ಸಾಹುಲ್ ಉಜಿರೆ ಅಭಿಪ್ರಾಯ ಪಟ್ಟಿದ್ದಾರೆ.

 ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಸುಮಾರು ಹತ್ತು ಕಡೆಗಳಲ್ಲಿ ಒಂದು ತಿಂಗಳ ಅಂತರದಲ್ಲಿ ಕಳ್ಳರು ಎಗ್ಗಿಲ್ಲದೆ ಕಳ್ಳತನ ನಡೆಸುತ್ತಿದ್ದು ಪ್ರಕರಣಗಳನ್ನು ಗಮನಿಸಿದರೆ ಸಹಜವಾಗಿಯೇ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಬಗ್ಗೆ ಬೇಸರ ಮೂಡುತ್ತಿದೆ. ತಾಲೂಕಿನ ಕಕ್ಕಿಂಜೆ, ನೆರಿಯಾ, ಉಜಿರೆ, ಬೆಳ್ತಂಗಡಿ, ಪೇರಲ್ದರ ಕಟ್ಟೆ, ಗುರುವಾಯನಕೆರೆ, ನಾರಾವಿ ಪ್ರದೇಶದಲ್ಲಿ ರಾತ್ರಿ ಹೊತ್ತು ಅಂಗಡಿ ಬೀಗ ಮುರಿದು ಕಳ್ಳರ ತಂಡ ಕಳ್ಳತನ ನಡೆಸುತ್ತಿದ್ದು ಈ ಬಗ್ಗೆ ಸಿಸಿ ಟಿವಿ ದೃಶ್ಯವಳಿ ದೊರೆತಿದ್ದು ಪೊಲೀಸ್ ಇಲಾಖೆ ಕೃತ್ಯದಲ್ಲಿ ಪಾಲ್ಗೊಂಡಿರುವ ಕಳ್ಳರನ್ನು ಆದಷ್ಟು ಬೇಗ ಪತ್ತೆಹಚ್ಚಿ ವ್ಯಾಪಾರಸ್ಥರ ಆತಂಕ ಕಡಿಮೆ ಮಾಡಬೇಕು ಎಂದು ತಿಳಿಸಿದ್ದಾರೆ. 

ಅಂಗಡಿಗಳಲ್ಲಿ ಕಳ್ಳರು ಕಳ್ಳತನ ಮಾಡಿದ್ದರಿಂದ ವ್ಯಾಪಾರಸ್ಥರು ಆರ್ಥಿಕ ನಷ್ಟದೊಂದಿಗೆ ಭಯದ ವಾತಾವರಣದಲ್ಲಿದ್ದಾರೆ. ಈ ಮೊದಲು ಪೊಲೀಸ್‌ ಇಲಾಖೆ ಗಸ್ತಿ ಮಾಡುತ್ತಿದ್ದರು. ಆದರೆ, ಇತ್ತೀಚಿಗೆ ಬರುತ್ತಿಲ್ಲದ್ದರಿಂದ ಕಳ್ಳರು ಅಂಗಡಿಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದಾರೆ. ಕೂಡಲೇ ಪೊಲೀಸ್ ಇಲಾಖೆ ರಾತ್ರಿ ವೇಳೆ ಹೆಚ್ಚಿನ ಗಸ್ತಿಗೆ ಪೊಲೀಸರನ್ನು ನಿಯೋಜಿಸಬೇಕು ಹಾಗೂ ಇಷ್ಟು ಪ್ರಕರಣದಲ್ಲಿ ಭಾಗಿಯಾಗಿರುವ ಕಳ್ಳರ ಪತ್ತೆಗೆ ಪ್ರತ್ಯೇಕ ಪೊಲೀಸ್ ತಂಡ ರಚಿಸಿ ಪತ್ತೆ ಹಚ್ಚಬೇಕು ಎಂದು ಎಸ್‌ಡಿಪಿಐ ಉಜಿರೆ ಬ್ಲಾಕ್ ಅಧ್ಯಕ್ಷರಾದ ಸಾಹುಲ್ ಉಜಿರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಉದ್ಘಾಟನೆ; ನಂಬಿಕೆ, ಪರಂಪರೆಯ ಶ್ರೇಷ್ಠ ಸ್ವರ್ಣೋದ್ಯಮ ಸಂಸ್ಥೆ ಮುಳಿಯ: ಸಂಪತ್ ಬಿ. ಸುವರ್ಣ; 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya
error: Content is protected !!