ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಪುದುವೆಟ್ಟು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪುದುವೆಟ್ಟು ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪ್ರತಿಭಟನಾ ಸಭೆ ನಡೆಸಿ ನಂತರ ಪುದುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಿಯ್ಯಾರು ವನದುರ್ಗಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ನಿತ್ಯಾನಂದ ಗೌಡ, ಸೋಮಗೌಡ ನೆಕ್ಕಿಲಾಡಿ, ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ದೇವಣ್ಣಗೌಡ, ಶ್ರೀ ನಿವಾಸ ಗೌಡ ಪಡ್ಪು, ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಅನಿತಾ, ಗ್ರಾಮ ಸಮಿತಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ದಾಮೋದರ ಗೌಡ ಸ್ವಾಗತಿಸಿ, ಪುದುವೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯಶವಂತ್ ಗೌಡ ಧನ್ಯವಾದವಿತ್ತರು.

Leave a Comment

error: Content is protected !!