24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ದಿ| ಪಿ. ಗಣಪತಿ ರಾವ್ ಹಾಗೂ ಲಕ್ಷ್ಮೀ ದಂಪತಿಯ ಪುತ್ರ ಪಣಿಯಾಡಿ ವಾಸುದೇವ ರಾವ್, ಇಸ್ರೋದಲ್ಲಿ ಹಿರಿಯ ವಿಜ್ಞಾನಿ, ಚಂದ್ರಯಾನದ ಉಪಗ್ರಹ ಹೊತ್ತೊಯ್ಯಲು ಎಲ್‌ವಿಎಂ-3 ಮತ್ತು ಎಲ್ 110-10 ರಾಕೆಟ್‌ ಗಳಿದ್ದು, ಈ ಪೈಕಿ ಇಂಧನ ಹಾಗೂ ಆಕ್ಸಿಜನ್ ಹೊತ್ತೊಯ್ಯುವ ಪ್ರಥಮ ಸ್ಟೇಜ್, ಎಲ್110-10ನ್ನು ತಯಾರಿ ಹಾಗೂ ಪರೀಕ್ಷೆ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಬಿಡಿ ಭಾಗವನ್ನು ಬೆಂಗಳೂರು ಎಚ್ ಎಎಲ್‌ನಲ್ಲಿ ಸಿದ್ಧಪಡಿಸಿ ಇಸ್ರೋದ ತಿರುವನಂತಪುರದಲ್ಲಿ ಇರುವ ಮಹೇಂದ್ರಗಿರಿಗೆ ಕಳುಹಿಸಿಕೊಡುವವರೆಗಿನ ಕಾರ್ಯವನ್ನು ತನ್ನ ತಂಡದೊಂದಿಗೆ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು.

ಅವರು ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಧರ್ಮಸ್ಥಳದಲ್ಲಿ, ಉಜಿರೆ ಎಸ್‌ ಡಿಎಂನಲ್ಲಿ ಪಿಯುಸಿ, ಬಳಿಕ ಮಂಗಳೂರು ಕೆಪಿಟಿ ಯಲ್ಲಿ ಡಿಪ್ಲೊಮಾ ರಾಜ್ಯಕ್ಕೆ 4ನೇ ರ್‍ಯಾಂಕ್, ಮಂಡ್ಯ ಡಿಇಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ (ರಾಜ್ಯಕ್ಕೆ 6ನೇ ರ್‍ಯಾಂಕ್ ಪಡೆದು ಇಸ್ರೋದ ತ್ರಿವೆಂಡ್ರಮ್‌ನಲ್ಲಿರುವ ಮಹೇಂದ್ರ ಗಿರಿಗೆ ನೇಮಕಗೊಂಡಿದ್ದರು.

ಇಸ್ರೋದಲ್ಲಿ 32 ವರ್ಷ ಸೇವೆ ಸಲ್ಲಿಸಿದ್ದು 2024 ಆಗಸ್ಟ್‌ಗೆ ನಿವೃತ್ತರಾಗಲಿದ್ದಾರೆ.

ಇವರು ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ್ ರಾವ್ ರವರ ಸಹೋದರ.

ಪತ್ನಿ ಕಾವೇರಿ ಹಾಗೂ ಎಂಜಿನಿಯ‌ರ್ ಪದವಿ ಪೂರ್ಣಗೊಳಿಸಿದ ಮೂವರು ಪುತ್ರರೊಂದಿಗೆ ಬೆಂಗಳೂರಿನಲ್ಲಿದ್ದಾರೆ.

Related posts

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya
error: Content is protected !!