July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿರಂಜೀವಿ ಶೆಟ್ಟಿ ನಾಳ ನಿರ್ಮಾಣದ ‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆ ಬಿಡುಗಡೆ

ಓಡಿಲ್ನಾಳ: ವರಮಹಾಲಕ್ಷ್ಮೀ ಪೂಜೆಯ ಶುಭ ಸಂದರ್ಭದಲ್ಲಿ ಮೃತ್ಯುಂಜಯ ಎನ್ನುವ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಿ ಗೀತೆಯನ್ನು ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲ ಶೆಟ್ಟಿಯವರು ಮೃತ್ಯುಂಜಯ ಗೀತೆಯನ್ನು ನಿರ್ಮಾಣ ಮಾಡಿರುವ ಚಿರಂಜೀವಿ ಶೆಟ್ಟಿ ನಾಳ ಇವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.


ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಪ್ರದಾನ ಅರ್ಚಕರಾದ ಪ್ರಸನ್ನ ಹೆಗಡೆ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲ ಶೆಟ್ಟಿ ಮತ್ತು ಕಾರ್ಯದರ್ಶಿ ವಿಮಲಾಕ್ಷ ಗೌಡ, ಯುವ ಸಮಿತಿಯ ಅಧ್ಯಕ್ಷರಾದ ನಿತೀಶ್ ಕೆ ಓಡಿಲ್ನಾಳ, ರಾಜ್ ಪ್ರಕಾಶ್ ಶೆಟ್ಟಿ ಸಾಹಿತ್ಯ ಬರೆದ ಸುಮನ್ ಏರ್ಮೆತೋಡಿ ಅಭಿನಯ ಮಾಡಿರುವ ಆಶ್ವಿತಾ, ನಿರೀಕ್ಷಾ ವಿ ಗೌಡ, ಗಾಯನ ಜಯಶ್ರೀ ಬೆಳ್ತಂಗಡಿ ಮತ್ತು ಅಶ್ವಿನಿ ರವಿ ಕುಲಾಲ್ , ಚಿತ್ರೀಕರಣ ಮಾಡಿದ ಅನೀಶ್ ನಾಯಕ್ ಮತ್ತು ತಂಡ ಹಾಗೂ ಆಡಳಿತ ಮಂಡಳಿಯ ಮತ್ತು ಯುವ ಸಮಿತಿಯ ಎಲ್ಲಾ ಸರ್ವ ಸದಸ್ಯರು , ಹಾಗೂ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಕಾರ್ಯದರ್ಶಿ ಮತ್ತು ಸರ್ವ ಸದಸ್ಯರು ಮತ್ತು ಊರಿನ ಭಕ್ತ ಸಮೂಹ ಸಹಕರಿಸಿದರು.




Related posts

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಕಾಳುಮೆಣಸಿನ ಸುಧಾರಿತ ತಾಂತ್ರಿಕತೆಗಳ ತರಬೇತಿ ಕಾರ್ಯಕ್ರಮ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya
error: Content is protected !!