March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

ಬೆಳ್ತಂಗಡಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಹೆತ್ತವರು ಮಹತ್ವ ಪೂರ್ಣವಾದ ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಹೆತ್ತವರ ನಿರಂತರ ಪ್ರಯತ್ನದಿಂದ ವಿದ್ಯಾರ್ಥಿಗಳು ಸ್ವತ: ಪರಿಶ್ರಮದಲ್ಲಿ ಮುಂದುವರಿವಂತಾಗಬೇಕು. ತಮ್ಮ ಮಕ್ಕಳನ್ನು ಗಮನಿಸಿ ತಾಳ್ಮೆ, ಸಹನೆಯಿಂದ ಹಿತವಚನವನ್ನು ಹೇಳಿ ಜೀವನದ ಸವಾಲುಗಳನ್ನು ಎದುರಿಸುವ ಬುದ್ಧಿವಂತರನ್ನಾಗಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಪರೀಕ್ಷಾ ವ್ಯವಸ್ಥೆಯಲ್ಲಿ ಆದ ಬದಲಾವಣೆ ಕುರಿತು ಮಾಹಿತಿ ನೀಡಿದರು.

ಉಪನ್ಯಾಸಕರಾದ ಶ್ರೀಮತಿ ಅನುರಾಧ ಕೆ ರಾವ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಹೇಮಲತಾ ವಂದಿಸಿದರು. ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಸಿಎಸ್ಇಇಟಿ ಪರೀಕ್ಷೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಸಾಧನೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಮಟ್ಟದ 25ನೇ ಜನಸ್ಪಂದನ ಸಭೆ: ನಾಡ ಕಚೇರಿಯ ಬೇಡಿಕೆ – ಚಿರತೆ ಕಾಟದಿಂದ ಜನರಲ್ಲಿ ಆತಂಕ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!