23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

ಬೆಳ್ತಂಗಡಿ: ನಾರಾವಿ ಅಳದಂಗಡಿ ಈ ಭಾಗದಿಂದ ತಾಲೂಕಿನ ಶಾಲಾ ಕಾಲೇಜಿಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿದ್ದು ಇವರು ಸರ್ಕಾರಿ ಬಸ್ಸಿನ ಸಮಸ್ಯೆಯನ್ನು ಎದುರಿಸುತ್ತಿದ್ದು ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರಿ ಬಸ್ಸಿಗೆ ಮನವಿ ನೀಡಿದ್ದು ಇದಕ್ಕೆ ಸರಿಯಾಗಿ ಸರ್ಕಾರಿ ಬಸ್ಸಿನ ವ್ಯವಸ್ಥೆಗೆ ಅದೇಶ ಹೊರಡಿಸಿದ್ದು ಇದೀಗ ರಾಜ್ಯ ಸರ್ಕಾರ ಬಸ್ಸಿನ ತಡೆ ಹಿಡಿದಿರುವ ಕಾರಣ ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿ ಪರಿಷತ್ ಇಂದು ಸರ್ಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆಯನ್ನು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.

ಹಲವಾರು ವರ್ಷಗಳ ಬೇಡಿಕೆಯಂತೆ ಕೆಎಸ್‌ಆರ್‌ಟಿಸಿ ಧರ್ಮಸ್ಥಳ – ನಾರಾವಿಗೆ ಸರ್ಕಾರಿ ಬಸ್ ಸಂಚಾರಕ್ಕೆ ಅನುಮತಿ ನೀಡಿ, ಸಂಚಾರಕ್ಕೆ ಸಮಯವನ್ನೂ ನಿಗದಿ ಪಡಿಸಿದ ಪ್ರಕಟಣೆ ಹೊರಡಿಸಿತ್ತು. ಹೀಗಾಗಿ ಆ ಭಾಗದ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದರು. ಆದರೆ ಇವತ್ತು ಏಕಾಏಕಿ ಬಸ್ ಸೇವೆ ಮುಂದೂಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಿಂದ ಸ್ಥಳೀಯರು ಸೇರಿದಂತೆ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದ್ದು ರಾಜಕೀಯ ಉದ್ದೇಶದಿಂದ ಬಸ್ ತಡೆ ಹಿಡಿಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ಸಂಚಾಲಕ ಸುವಿತ್ ಶೆಟ್ಟಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖರಾದ ಸುಮಂತ್, ಶ್ರೇಯಸ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಹೊಸಂಗಡಿಯಲ್ಲಿ ಮುಂಚೂಣಿ ಪ್ರಾತ್ಯಕ್ಷಿಕೆ ಅಂಗವಾಗಿ ಅಡಿಕೆ ಎಲೆ ಚುಕ್ಕಿ ರೋಗದ ಸಮಗ್ರ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

Suddi Udaya
error: Content is protected !!