April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

ಬೆಳ್ತಂಗಡಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಹೆತ್ತವರು ಮಹತ್ವ ಪೂರ್ಣವಾದ ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಹೆತ್ತವರ ನಿರಂತರ ಪ್ರಯತ್ನದಿಂದ ವಿದ್ಯಾರ್ಥಿಗಳು ಸ್ವತ: ಪರಿಶ್ರಮದಲ್ಲಿ ಮುಂದುವರಿವಂತಾಗಬೇಕು. ತಮ್ಮ ಮಕ್ಕಳನ್ನು ಗಮನಿಸಿ ತಾಳ್ಮೆ, ಸಹನೆಯಿಂದ ಹಿತವಚನವನ್ನು ಹೇಳಿ ಜೀವನದ ಸವಾಲುಗಳನ್ನು ಎದುರಿಸುವ ಬುದ್ಧಿವಂತರನ್ನಾಗಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಪರೀಕ್ಷಾ ವ್ಯವಸ್ಥೆಯಲ್ಲಿ ಆದ ಬದಲಾವಣೆ ಕುರಿತು ಮಾಹಿತಿ ನೀಡಿದರು.

ಉಪನ್ಯಾಸಕರಾದ ಶ್ರೀಮತಿ ಅನುರಾಧ ಕೆ ರಾವ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಹೇಮಲತಾ ವಂದಿಸಿದರು. ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಸಿಎ ಪರೀಕ್ಷೆಯಲ್ಲಿ ಕಿನ್ನಿಗೋಳಿ ರಾಹುಲ್ ಉತ್ತೀರ್ಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ