25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

ಬೆಳ್ತಂಗಡಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಹೆತ್ತವರು ಮಹತ್ವ ಪೂರ್ಣವಾದ ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಹೆತ್ತವರ ನಿರಂತರ ಪ್ರಯತ್ನದಿಂದ ವಿದ್ಯಾರ್ಥಿಗಳು ಸ್ವತ: ಪರಿಶ್ರಮದಲ್ಲಿ ಮುಂದುವರಿವಂತಾಗಬೇಕು. ತಮ್ಮ ಮಕ್ಕಳನ್ನು ಗಮನಿಸಿ ತಾಳ್ಮೆ, ಸಹನೆಯಿಂದ ಹಿತವಚನವನ್ನು ಹೇಳಿ ಜೀವನದ ಸವಾಲುಗಳನ್ನು ಎದುರಿಸುವ ಬುದ್ಧಿವಂತರನ್ನಾಗಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಪರೀಕ್ಷಾ ವ್ಯವಸ್ಥೆಯಲ್ಲಿ ಆದ ಬದಲಾವಣೆ ಕುರಿತು ಮಾಹಿತಿ ನೀಡಿದರು.

ಉಪನ್ಯಾಸಕರಾದ ಶ್ರೀಮತಿ ಅನುರಾಧ ಕೆ ರಾವ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಹೇಮಲತಾ ವಂದಿಸಿದರು. ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya
error: Content is protected !!