September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ-ನಾರಾವಿ ನಡುವಿನ ಸರಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಇಂದು ಸಂಜೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ: ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಇಂದಿನಿಂದ (ಆ.25) ಪ್ರಾರಂಭಗೊಳ್ಳುವ ಬಗ್ಗೆ ಕೆಎಸ್‌ಆರ್‌ಟಿಸಿ ಕಳೆದ ಎರಡು ದಿನಗಳ ಹಿಂದೆ ಪ್ರಕಟಣೆ ಹೊರಡಿಸಿತ್ತು. ಆದರೆ ಬಸ್ ಸಂಚಾರಕ್ಕೆ ತಡೆ ಒಡ್ಡಲಾಗಿದೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿ ಪರಿಷತ್ ಇಂದು ಸಂಜೆ 3 ಗಂಟೆಗೆ ಸರ್ಕಾರಿ ಬಸ್ ತಡೆ ಹಿಡಿದಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೃಹತ್ ಪ್ರತಿಭಟನೆಯನ್ನು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಲಿದೆ.

ಹಲವಾರು ವರ್ಷಗಳ ಬೇಡಿಕೆಯಂತೆ ಕೆಎಸ್‌ಆರ್‌ಟಿಸಿ ಧರ್ಮಸ್ಥಳ – ನಾರಾವಿಗೆ ಸರ್ಕಾರಿ ಬಸ್ ಸಂಚಾರಕ್ಕೆ ಅನುಮತಿ ನೀಡಿ, ಸಂಚಾರಕ್ಕೆ ಸಮಯವನ್ನೂ ನಿಗದಿ ಪಡಿಸಿದ ಪ್ರಕಟಣೆ ಹೊರಡಿಸಿತ್ತು. ಹೀಗಾಗಿ ಆ ಭಾಗದ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದರು. ಆದರೆ ಇವತ್ತು ಏಕಾಏಕಿ ಬಸ್ ಸೇವೆ ಮುಂದೂಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದರಿಂದ ಸ್ಥಳೀಯರು ಸೇರಿದಂತೆ ವಿದ್ಯಾರ್ಥಿಗಳಿಗೆ ನಿರಾಸೆಯಾಗಿದ್ದು ರಾಜಕೀಯ ಉದ್ದೇಶದಿಂದ ಬಸ್ ತಡೆ ಹಿಡಿಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

Related posts

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!