ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆ, ನೂರಾರು ವೃತಧಾರಿಗಳು ಪೂಜೆಯಲ್ಲಿ ಭಾಗಿ

Suddi Udaya

ಲಾಯಿಲ: ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದ ವತಿಯಿಂದ ಶಿವಪ್ರಸಾದ ಪುರೋಹಿತರು ಸವಣಾಲು ಇವರ ಆಚಾರ್ಯತ್ವದಲ್ಲಿ ಶ್ರೀ ಕಾಳಿಕಾಂಬ ಪೂಜೆ ಹಾಗೂ ಶ್ರೀ ವರಮಹಾಲಕ್ಷ್ಮೀ ಪೂಜೆಯು ಲಾಯಿಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಜರುಗಿತು.

ಸುಮಾರು 100ಕ್ಕೂ ಹೆಚ್ಚು ವೃತಧಾರಿ ಮಹಿಳೆಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದ ಅಧ್ಯಕ್ಷ ವಸಂತಿ ಮೋಹನ ಆಚಾರ್ಯ, ಕೋಶಾಧಿಕಾರಿ ವಿಜಯ ಶ್ರೀನಿವಾಸ ಆಚಾರ್ಯ, ಪುಷ್ಪಾ ಗಣೇಶ್ ಆಚಾರ್ಯ ಬಲ್ಯಾಯಕೋಡಿ, ಪದಾಧಿಕಾರಿಗಳು, ಸದಸ್ಯರು, ಶ್ರೀ ವಿಶ್ವಕರ್ಮಾಭ್ಯುದಯ ಸಭಾದ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಮತ್ತು ಭಕ್ತಾಧಿಕಗಳು ಉಪಸ್ಥಿತರಿದ್ದರು.

Leave a Comment

error: Content is protected !!