ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆಯ ಸಹಕಾರದೊಂದಿಗೆ ಬಿಲ್ಲವ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಸಂಘದ ಸಭಾಭವನದಲ್ಲಿ ನಡೆಯಿತು.

ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ ನಡೆಯಿತು.ನೂರಾರು ಮಹಿಳಾ ವೃತಧಾರಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.ಆರ್ಚಕ ರಘುನಾಥ ಶಾಂತಿ ಮತ್ತು ಬಳಗದವರು ಪೂಜೆಯನ್ನು ನೇರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ,ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಜಿತ ವಿ ಬಂಗೇರ,ಕಾರ್ಯದರ್ಶಿ ಶಾಂಭವಿ ಪಿ ಬಂಗೇರ,ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷರುಗಳು,ಸಂಘದ ಪದಾಧಿಕಾರಿಗಳು,ನಿರ್ದೇಶಕರುಗಳು ಉಪಸ್ಥಿತರಿದ್ದರು.

Leave a Comment

error: Content is protected !!