ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

ತೆಕ್ಕಾರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಒಂಟಿ ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕ ವಾಸವಿರುವ ಮನೆಗೆ ಏಕಾ ಏಕಿ ನುಗ್ಗಿದ ಐದು ಮಂದಿ ದುಷ್ಕರ್ಮಿಗಳ ತಂಡ ಯುವಕನಿಗೆ ಥಳಿಸಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ
ಘಟನೆ ಸಂಭವಿಸಿದೆ.

ಹಲ್ಲೆಗೊಳಗಾದ ಯುವಕನನ್ನು ಮುಝಮ್ಮಿಲ್ (19) ಎಂಡೋಸಲ್ಫಾನ್ ಪೀಡಿತ ಸಂತ್ರಸ್ತನಾಗಿದ್ದು ಮಾನಸಿಕ ಖಾಯಿಲೆಯಿಂದ ಬಳಲುತ್ತಿರುವವನಾಗಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆಯನ್ನು ಆತನ ತಾಯಿ ಮೈಮುನ (38) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಐದು ಮಂದಿ ದುಷ್ಕರ್ಮಿಗಳ ಗುಂಪು ಒಂಟಿ ಮಹಿಳೆ ಹಾಗೂ ಎಂಡೋಸಲ್ಫಾನ್ ಪೀಡಿತ ಮಗ ವಾಸವಿರುವ ಮನೆಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಸಂದರ್ಭದಲ್ಲಿ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಗ ಬೊಬ್ಬೆಹಾಕಿ ಅಡ್ಡ ಬಂದಾಗ ಮಗನಿಗೂ ಮನಬಂದಂತೆ ಥಳಿಸಿದ್ದರು ಎನ್ನಲಾಗಿದೆ.

ಸಂತ್ರಸ್ತ ಮಹಿಳೆ ಹಾಗೂ ಹಲ್ಲೆಗೊಳಗಾದ ಮಗ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya
error: Content is protected !!