34.3 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಂತೆ ಕಿರ್ಲೋಸ್ಕರ್ ಮೋಟರ್ಸ್ ರವರು ಐಟಿಐ ವೇಣೂರಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಉತ್ಕೃಷ್ಟ ತರಬೇತಿಯನ್ನು ನೀಡಲಿದ್ದು ತರಬೇತಿಯ ಮೊದಲ ಹಂತದಲ್ಲಿ ಬೆಂಗಳೂರಿನ ಟೊಯೋಟಾ ಕಂಪನಿಯಲ್ಲಿ ತರಬೇತಿಯನ್ನು ನೀಡಿ ಬಳಿಕ ವೇಣೂರಿನ ಐಟಿಐಯಲ್ಲಿ ಕೌಶಲ್ಯವೃದ್ಧಿ ತರಬೇತಿಯನ್ನು ನೀಡಲಿದ್ದಾರೆ.

ಈ ಉನ್ನತ ಕೌಶಲ್ಯ ಸಾಧನೆಗಾಗಿ ಸಂಸ್ಥೆಯು ವಿಶೇಷ ವಿನ್ಯಾಸದ ತರಬೇತಿ ಉಪಕರಣಗಳನ್ನು ಹೊಂದಬೇಕಾಗಿದೆ. ತರಬೇತಿಯ ಬಳಿಕ ಕಂಪೆನಿಯು ಉದ್ಯೋಗದ ಸಮಯದಲ್ಲಿ ಪ್ರಥಮ ಆದ್ಯತೆಯ ಮೇರೆಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಪರಿಗಣಿಸಲಾಗುತ್ತದೆ. ಈ ಮೂಲಕ ವೇಣೂರಿನ ಐಟಿಐಯು ತನ್ನ ಉತ್ಕೃಷ್ಟತೆಯ ಇನ್ನೊಂದು ಮೈಲುಗಲ್ಲನ್ನು ಸ್ಥಾಪಿಸಿದಂತಾಗಿದೆ. ಒಡಂಬಡಿಕೆಗೆ ಟೊಯೋಟಾ ಕಂಪನಿಯ ಪರವಾಗಿ ವೆಂಕಟೇಶ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಐಟಿಐ ಪರವಾಗಿ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಸಹಿ ಮಾಡಿದರು. ಸಂಸ್ಥೆಯ ಈ ಸಾಧನೆಗಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಆಡಳಿತ ಮಂಡಳಿಯವರು ಸಂಸ್ಥೆಗೆ ಅಭಿನಂದನೆಯನ್ನು ತಿಳಿಸುತ್ತಾರೆ.

Related posts

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya
error: Content is protected !!