25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಂತೆ ಕಿರ್ಲೋಸ್ಕರ್ ಮೋಟರ್ಸ್ ರವರು ಐಟಿಐ ವೇಣೂರಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಉತ್ಕೃಷ್ಟ ತರಬೇತಿಯನ್ನು ನೀಡಲಿದ್ದು ತರಬೇತಿಯ ಮೊದಲ ಹಂತದಲ್ಲಿ ಬೆಂಗಳೂರಿನ ಟೊಯೋಟಾ ಕಂಪನಿಯಲ್ಲಿ ತರಬೇತಿಯನ್ನು ನೀಡಿ ಬಳಿಕ ವೇಣೂರಿನ ಐಟಿಐಯಲ್ಲಿ ಕೌಶಲ್ಯವೃದ್ಧಿ ತರಬೇತಿಯನ್ನು ನೀಡಲಿದ್ದಾರೆ.

ಈ ಉನ್ನತ ಕೌಶಲ್ಯ ಸಾಧನೆಗಾಗಿ ಸಂಸ್ಥೆಯು ವಿಶೇಷ ವಿನ್ಯಾಸದ ತರಬೇತಿ ಉಪಕರಣಗಳನ್ನು ಹೊಂದಬೇಕಾಗಿದೆ. ತರಬೇತಿಯ ಬಳಿಕ ಕಂಪೆನಿಯು ಉದ್ಯೋಗದ ಸಮಯದಲ್ಲಿ ಪ್ರಥಮ ಆದ್ಯತೆಯ ಮೇರೆಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಪರಿಗಣಿಸಲಾಗುತ್ತದೆ. ಈ ಮೂಲಕ ವೇಣೂರಿನ ಐಟಿಐಯು ತನ್ನ ಉತ್ಕೃಷ್ಟತೆಯ ಇನ್ನೊಂದು ಮೈಲುಗಲ್ಲನ್ನು ಸ್ಥಾಪಿಸಿದಂತಾಗಿದೆ. ಒಡಂಬಡಿಕೆಗೆ ಟೊಯೋಟಾ ಕಂಪನಿಯ ಪರವಾಗಿ ವೆಂಕಟೇಶ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಐಟಿಐ ಪರವಾಗಿ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಸಹಿ ಮಾಡಿದರು. ಸಂಸ್ಥೆಯ ಈ ಸಾಧನೆಗಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಆಡಳಿತ ಮಂಡಳಿಯವರು ಸಂಸ್ಥೆಗೆ ಅಭಿನಂದನೆಯನ್ನು ತಿಳಿಸುತ್ತಾರೆ.

Related posts

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!