38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಂತೆ ಕಿರ್ಲೋಸ್ಕರ್ ಮೋಟರ್ಸ್ ರವರು ಐಟಿಐ ವೇಣೂರಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಉತ್ಕೃಷ್ಟ ತರಬೇತಿಯನ್ನು ನೀಡಲಿದ್ದು ತರಬೇತಿಯ ಮೊದಲ ಹಂತದಲ್ಲಿ ಬೆಂಗಳೂರಿನ ಟೊಯೋಟಾ ಕಂಪನಿಯಲ್ಲಿ ತರಬೇತಿಯನ್ನು ನೀಡಿ ಬಳಿಕ ವೇಣೂರಿನ ಐಟಿಐಯಲ್ಲಿ ಕೌಶಲ್ಯವೃದ್ಧಿ ತರಬೇತಿಯನ್ನು ನೀಡಲಿದ್ದಾರೆ.

ಈ ಉನ್ನತ ಕೌಶಲ್ಯ ಸಾಧನೆಗಾಗಿ ಸಂಸ್ಥೆಯು ವಿಶೇಷ ವಿನ್ಯಾಸದ ತರಬೇತಿ ಉಪಕರಣಗಳನ್ನು ಹೊಂದಬೇಕಾಗಿದೆ. ತರಬೇತಿಯ ಬಳಿಕ ಕಂಪೆನಿಯು ಉದ್ಯೋಗದ ಸಮಯದಲ್ಲಿ ಪ್ರಥಮ ಆದ್ಯತೆಯ ಮೇರೆಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಪರಿಗಣಿಸಲಾಗುತ್ತದೆ. ಈ ಮೂಲಕ ವೇಣೂರಿನ ಐಟಿಐಯು ತನ್ನ ಉತ್ಕೃಷ್ಟತೆಯ ಇನ್ನೊಂದು ಮೈಲುಗಲ್ಲನ್ನು ಸ್ಥಾಪಿಸಿದಂತಾಗಿದೆ. ಒಡಂಬಡಿಕೆಗೆ ಟೊಯೋಟಾ ಕಂಪನಿಯ ಪರವಾಗಿ ವೆಂಕಟೇಶ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಐಟಿಐ ಪರವಾಗಿ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಸಹಿ ಮಾಡಿದರು. ಸಂಸ್ಥೆಯ ಈ ಸಾಧನೆಗಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಆಡಳಿತ ಮಂಡಳಿಯವರು ಸಂಸ್ಥೆಗೆ ಅಭಿನಂದನೆಯನ್ನು ತಿಳಿಸುತ್ತಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಎಸ್ ಡಿ ಎಂ ಪಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂವಾದ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya
error: Content is protected !!