25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಂತೆ ಕಿರ್ಲೋಸ್ಕರ್ ಮೋಟರ್ಸ್ ರವರು ಐಟಿಐ ವೇಣೂರಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಉತ್ಕೃಷ್ಟ ತರಬೇತಿಯನ್ನು ನೀಡಲಿದ್ದು ತರಬೇತಿಯ ಮೊದಲ ಹಂತದಲ್ಲಿ ಬೆಂಗಳೂರಿನ ಟೊಯೋಟಾ ಕಂಪನಿಯಲ್ಲಿ ತರಬೇತಿಯನ್ನು ನೀಡಿ ಬಳಿಕ ವೇಣೂರಿನ ಐಟಿಐಯಲ್ಲಿ ಕೌಶಲ್ಯವೃದ್ಧಿ ತರಬೇತಿಯನ್ನು ನೀಡಲಿದ್ದಾರೆ.

ಈ ಉನ್ನತ ಕೌಶಲ್ಯ ಸಾಧನೆಗಾಗಿ ಸಂಸ್ಥೆಯು ವಿಶೇಷ ವಿನ್ಯಾಸದ ತರಬೇತಿ ಉಪಕರಣಗಳನ್ನು ಹೊಂದಬೇಕಾಗಿದೆ. ತರಬೇತಿಯ ಬಳಿಕ ಕಂಪೆನಿಯು ಉದ್ಯೋಗದ ಸಮಯದಲ್ಲಿ ಪ್ರಥಮ ಆದ್ಯತೆಯ ಮೇರೆಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಪರಿಗಣಿಸಲಾಗುತ್ತದೆ. ಈ ಮೂಲಕ ವೇಣೂರಿನ ಐಟಿಐಯು ತನ್ನ ಉತ್ಕೃಷ್ಟತೆಯ ಇನ್ನೊಂದು ಮೈಲುಗಲ್ಲನ್ನು ಸ್ಥಾಪಿಸಿದಂತಾಗಿದೆ. ಒಡಂಬಡಿಕೆಗೆ ಟೊಯೋಟಾ ಕಂಪನಿಯ ಪರವಾಗಿ ವೆಂಕಟೇಶ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಐಟಿಐ ಪರವಾಗಿ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಸಹಿ ಮಾಡಿದರು. ಸಂಸ್ಥೆಯ ಈ ಸಾಧನೆಗಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಆಡಳಿತ ಮಂಡಳಿಯವರು ಸಂಸ್ಥೆಗೆ ಅಭಿನಂದನೆಯನ್ನು ತಿಳಿಸುತ್ತಾರೆ.

Related posts

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!