24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಂತೆ ಕಿರ್ಲೋಸ್ಕರ್ ಮೋಟರ್ಸ್ ರವರು ಐಟಿಐ ವೇಣೂರಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಉತ್ಕೃಷ್ಟ ತರಬೇತಿಯನ್ನು ನೀಡಲಿದ್ದು ತರಬೇತಿಯ ಮೊದಲ ಹಂತದಲ್ಲಿ ಬೆಂಗಳೂರಿನ ಟೊಯೋಟಾ ಕಂಪನಿಯಲ್ಲಿ ತರಬೇತಿಯನ್ನು ನೀಡಿ ಬಳಿಕ ವೇಣೂರಿನ ಐಟಿಐಯಲ್ಲಿ ಕೌಶಲ್ಯವೃದ್ಧಿ ತರಬೇತಿಯನ್ನು ನೀಡಲಿದ್ದಾರೆ.

ಈ ಉನ್ನತ ಕೌಶಲ್ಯ ಸಾಧನೆಗಾಗಿ ಸಂಸ್ಥೆಯು ವಿಶೇಷ ವಿನ್ಯಾಸದ ತರಬೇತಿ ಉಪಕರಣಗಳನ್ನು ಹೊಂದಬೇಕಾಗಿದೆ. ತರಬೇತಿಯ ಬಳಿಕ ಕಂಪೆನಿಯು ಉದ್ಯೋಗದ ಸಮಯದಲ್ಲಿ ಪ್ರಥಮ ಆದ್ಯತೆಯ ಮೇರೆಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಪರಿಗಣಿಸಲಾಗುತ್ತದೆ. ಈ ಮೂಲಕ ವೇಣೂರಿನ ಐಟಿಐಯು ತನ್ನ ಉತ್ಕೃಷ್ಟತೆಯ ಇನ್ನೊಂದು ಮೈಲುಗಲ್ಲನ್ನು ಸ್ಥಾಪಿಸಿದಂತಾಗಿದೆ. ಒಡಂಬಡಿಕೆಗೆ ಟೊಯೋಟಾ ಕಂಪನಿಯ ಪರವಾಗಿ ವೆಂಕಟೇಶ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಐಟಿಐ ಪರವಾಗಿ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಸಹಿ ಮಾಡಿದರು. ಸಂಸ್ಥೆಯ ಈ ಸಾಧನೆಗಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಆಡಳಿತ ಮಂಡಳಿಯವರು ಸಂಸ್ಥೆಗೆ ಅಭಿನಂದನೆಯನ್ನು ತಿಳಿಸುತ್ತಾರೆ.

Related posts

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿ ತಾಳಿಪಾಡಿ ಪಲಾರಗೋಳಿ ಮರೋಡಿ – ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ ಪುನರಾಯ್ಕೆ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya
error: Content is protected !!