22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು.

ಈ ಒಪ್ಪಂದದಂತೆ ಕಿರ್ಲೋಸ್ಕರ್ ಮೋಟರ್ಸ್ ರವರು ಐಟಿಐ ವೇಣೂರಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ಉತ್ಕೃಷ್ಟ ತರಬೇತಿಯನ್ನು ನೀಡಲಿದ್ದು ತರಬೇತಿಯ ಮೊದಲ ಹಂತದಲ್ಲಿ ಬೆಂಗಳೂರಿನ ಟೊಯೋಟಾ ಕಂಪನಿಯಲ್ಲಿ ತರಬೇತಿಯನ್ನು ನೀಡಿ ಬಳಿಕ ವೇಣೂರಿನ ಐಟಿಐಯಲ್ಲಿ ಕೌಶಲ್ಯವೃದ್ಧಿ ತರಬೇತಿಯನ್ನು ನೀಡಲಿದ್ದಾರೆ.

ಈ ಉನ್ನತ ಕೌಶಲ್ಯ ಸಾಧನೆಗಾಗಿ ಸಂಸ್ಥೆಯು ವಿಶೇಷ ವಿನ್ಯಾಸದ ತರಬೇತಿ ಉಪಕರಣಗಳನ್ನು ಹೊಂದಬೇಕಾಗಿದೆ. ತರಬೇತಿಯ ಬಳಿಕ ಕಂಪೆನಿಯು ಉದ್ಯೋಗದ ಸಮಯದಲ್ಲಿ ಪ್ರಥಮ ಆದ್ಯತೆಯ ಮೇರೆಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ ಪರಿಗಣಿಸಲಾಗುತ್ತದೆ. ಈ ಮೂಲಕ ವೇಣೂರಿನ ಐಟಿಐಯು ತನ್ನ ಉತ್ಕೃಷ್ಟತೆಯ ಇನ್ನೊಂದು ಮೈಲುಗಲ್ಲನ್ನು ಸ್ಥಾಪಿಸಿದಂತಾಗಿದೆ. ಒಡಂಬಡಿಕೆಗೆ ಟೊಯೋಟಾ ಕಂಪನಿಯ ಪರವಾಗಿ ವೆಂಕಟೇಶ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಮತ್ತು ಐಟಿಐ ಪರವಾಗಿ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಸಹಿ ಮಾಡಿದರು. ಸಂಸ್ಥೆಯ ಈ ಸಾಧನೆಗಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಆಡಳಿತ ಮಂಡಳಿಯವರು ಸಂಸ್ಥೆಗೆ ಅಭಿನಂದನೆಯನ್ನು ತಿಳಿಸುತ್ತಾರೆ.

Related posts

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ತರಬೇತಿ

Suddi Udaya

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya
error: Content is protected !!