26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

ಬೆಳ್ತಂಗಡಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಹೆತ್ತವರು ಮಹತ್ವ ಪೂರ್ಣವಾದ ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಮಾತನಾಡುತ್ತಾ, ಹೆತ್ತವರ ನಿರಂತರ ಪ್ರಯತ್ನದಿಂದ ವಿದ್ಯಾರ್ಥಿಗಳು ಸ್ವತ: ಪರಿಶ್ರಮದಲ್ಲಿ ಮುಂದುವರಿವಂತಾಗಬೇಕು. ತಮ್ಮ ಮಕ್ಕಳನ್ನು ಗಮನಿಸಿ ತಾಳ್ಮೆ, ಸಹನೆಯಿಂದ ಹಿತವಚನವನ್ನು ಹೇಳಿ ಜೀವನದ ಸವಾಲುಗಳನ್ನು ಎದುರಿಸುವ ಬುದ್ಧಿವಂತರನ್ನಾಗಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ಪರೀಕ್ಷಾ ವ್ಯವಸ್ಥೆಯಲ್ಲಿ ಆದ ಬದಲಾವಣೆ ಕುರಿತು ಮಾಹಿತಿ ನೀಡಿದರು.

ಉಪನ್ಯಾಸಕರಾದ ಶ್ರೀಮತಿ ಅನುರಾಧ ಕೆ ರಾವ್ ಸ್ವಾಗತಿಸಿದರು. ಉಪನ್ಯಾಸಕಿ ಶ್ರೀಮತಿ ಹೇಮಲತಾ ವಂದಿಸಿದರು. ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಶ್ರೀಮತಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!