24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

ಉಜಿರೆ: ಮಾಜಿ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿಯವರ ಜನ್ಮದಿನವನ್ನು ಅವರು ಮಾಡಿದ ಸದ್ಭಾವನೆಯ ಕಾರ್ಯಗಳನ್ನು ನೆನಪಿಸಿಕೊಳ್ಳುವುದಕ್ಕಾಗಿ ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ‘ಸದ್ಭಾವನಾ ದಿವಸ’ವನ್ನು ಆ.25 ರಂದು ಆಚರಿಸಲಾಯಿತು.

ಮುಖ್ಯಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಸಹಪ್ರಾಧ್ಯಾಪಕರದ ದಿವಾಕರ್ ಕೊಕ್ಕಡ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಕೃತಿಯ ನಿಯಮ ಮತ್ತು ಭಾರತದ ಜನಸಂಖ್ಯೆಯ ಬಗ್ಗೆ , ಸಂಪನ್ಮೂಲ ಮತ್ತು ಮಾನವ ಸಂಪನ್ಮೂಲಗಳ ಬಗ್ಗೆ ಮಾತನಾಡಿದರು. ದೇಶ ಬೆಳವಣಿಗೆಯ ಪಥದಲ್ಲಿ ನಡೆಯಬೇಕಾದರೆ ಭಾರತೀಯರ ನಡವಳಿಕೆ ಹೇಗಿರಬೇಕೆಂದು ಎಳೆ ಎಳೆಯಾಗಿ ಮಾಹಿತಿ ನೀಡಿದರು. ಯಾವುದೇ ಜಾತಿ ಕನಿಷ್ಠವಲ್ಲ ಯಾವುದೇ ಜಾತಿ ಶ್ರೇಷ್ಠವಲ್ಲ, ವೃತ್ತಿಗನುಸಾರವಾಗಿ ಜಾತಿ ಎಂದು ಅರಿವು ಮೂಡಿಸಿದರು. ಕುವೆಂಪುರವರ ಉತ್ತಮ ಕವಿತೆಗಳನ್ನು ಜ್ಞಾಪಿಸಿಕೊಂಡರು. ನಮ್ಮಲ್ಲಿ ಕೆಟ್ಟ ಕೆಲಸಗಳು ನಾಶವಾಗಲಿ ಪರಿಸರವನ್ನು ಬೆಳೆಸುವ ಸೌಹಾರ್ದತೆ ಎಲ್ಲರಲ್ಲಿಯೂ ಬೆಳೆಯಲಿ ಎಂದು ಎಲ್ಲರಿಗೂ ಕರೆ ನೀಡಿದರು.

ಎಸ್ ಡಿ ಎಮ್ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ರೋವರ್ ಸ್ಕೌಟ್ ಲೀಡರ್ ಆಗಿರುವ ಪ್ರಸಾದ್ ಕುಮಾರ್ ಜೈನ್ ಮತ್ತು ರೇಂಜರ್ಸ್ ಲೀಡರ್ ಗಾನವಿ .ಡಿ.ಜೈನ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಯೋಜಕ ಶಶಾಂಕ್ ಬಿಜೆ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕಿ ಪುಣ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಜೈನ್ ವಂದಿಸಿದರು.

Related posts

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya
error: Content is protected !!