September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಜಿರೆ : ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಇದರ ಆಶ್ರಯದಲ್ಲಿ ಮಂಗಳೂರಿನ ರೆಡ್ ಕ್ರಾಸ್ ರಕ್ತನಿಧಿ ಘಟಕದಿಂದ ಆ 26 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.


ಶಿಬಿರವನ್ನು ಉಜಿರೆಯ ಯಸ್ ಡಿ ಯಂ ಆಸ್ಪತ್ರೆಯ ಕಾರ್ಯನಿರ್ವಾಹಕ ಅಧಿಕಾರಿ ಜನಾರ್ಧನ್ ಅವರು ಉದ್ಘಾಟಿಸಿ ಶುಭಹಾರೈಸಿದರು, ರೆಡ್ ಕ್ರಾಸ್ ರಕ್ತನಿಧಿಯ ಅಧಿಕಾರಿ ಪ್ರವೀಣ್ ಕುಮಾರ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ಆಸ್ಪತ್ರೆಯ ಪ್ರಯೋಗಾಲಯ ಅಧಿಕಾರಿ ಶಿತಿಕಂಠ ಭಟ್, , ಎನ್ ಯಸ್ ಯಸ್ ಯೋಜನಾಧಿಕಾರಿ ಪ್ರಕಾಶ್ ಗೌಡ, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಒಟ್ಟು 107 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ಶಿರ್ಲಾಲು ಶ್ರೀರಾಮ್ ಫ್ರೆಂಡ್ಸ್ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ಸಂತೋಷ್

Suddi Udaya

ಎ.19-28: ಕಾಜೂರ್ ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!