April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

ಉಜಿರೆ: ಮಾಜಿ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿಯವರ ಜನ್ಮದಿನವನ್ನು ಅವರು ಮಾಡಿದ ಸದ್ಭಾವನೆಯ ಕಾರ್ಯಗಳನ್ನು ನೆನಪಿಸಿಕೊಳ್ಳುವುದಕ್ಕಾಗಿ ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ‘ಸದ್ಭಾವನಾ ದಿವಸ’ವನ್ನು ಆ.25 ರಂದು ಆಚರಿಸಲಾಯಿತು.

ಮುಖ್ಯಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಸಹಪ್ರಾಧ್ಯಾಪಕರದ ದಿವಾಕರ್ ಕೊಕ್ಕಡ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಕೃತಿಯ ನಿಯಮ ಮತ್ತು ಭಾರತದ ಜನಸಂಖ್ಯೆಯ ಬಗ್ಗೆ , ಸಂಪನ್ಮೂಲ ಮತ್ತು ಮಾನವ ಸಂಪನ್ಮೂಲಗಳ ಬಗ್ಗೆ ಮಾತನಾಡಿದರು. ದೇಶ ಬೆಳವಣಿಗೆಯ ಪಥದಲ್ಲಿ ನಡೆಯಬೇಕಾದರೆ ಭಾರತೀಯರ ನಡವಳಿಕೆ ಹೇಗಿರಬೇಕೆಂದು ಎಳೆ ಎಳೆಯಾಗಿ ಮಾಹಿತಿ ನೀಡಿದರು. ಯಾವುದೇ ಜಾತಿ ಕನಿಷ್ಠವಲ್ಲ ಯಾವುದೇ ಜಾತಿ ಶ್ರೇಷ್ಠವಲ್ಲ, ವೃತ್ತಿಗನುಸಾರವಾಗಿ ಜಾತಿ ಎಂದು ಅರಿವು ಮೂಡಿಸಿದರು. ಕುವೆಂಪುರವರ ಉತ್ತಮ ಕವಿತೆಗಳನ್ನು ಜ್ಞಾಪಿಸಿಕೊಂಡರು. ನಮ್ಮಲ್ಲಿ ಕೆಟ್ಟ ಕೆಲಸಗಳು ನಾಶವಾಗಲಿ ಪರಿಸರವನ್ನು ಬೆಳೆಸುವ ಸೌಹಾರ್ದತೆ ಎಲ್ಲರಲ್ಲಿಯೂ ಬೆಳೆಯಲಿ ಎಂದು ಎಲ್ಲರಿಗೂ ಕರೆ ನೀಡಿದರು.

ಎಸ್ ಡಿ ಎಮ್ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ರೋವರ್ ಸ್ಕೌಟ್ ಲೀಡರ್ ಆಗಿರುವ ಪ್ರಸಾದ್ ಕುಮಾರ್ ಜೈನ್ ಮತ್ತು ರೇಂಜರ್ಸ್ ಲೀಡರ್ ಗಾನವಿ .ಡಿ.ಜೈನ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಯೋಜಕ ಶಶಾಂಕ್ ಬಿಜೆ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕಿ ಪುಣ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಜೈನ್ ವಂದಿಸಿದರು.

Related posts

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!