23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಜಿರೆ : ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಹಾಗೂ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಇದರ ಆಶ್ರಯದಲ್ಲಿ ಮಂಗಳೂರಿನ ರೆಡ್ ಕ್ರಾಸ್ ರಕ್ತನಿಧಿ ಘಟಕದಿಂದ ಆ 26 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.


ಶಿಬಿರವನ್ನು ಉಜಿರೆಯ ಯಸ್ ಡಿ ಯಂ ಆಸ್ಪತ್ರೆಯ ಕಾರ್ಯನಿರ್ವಾಹಕ ಅಧಿಕಾರಿ ಜನಾರ್ಧನ್ ಅವರು ಉದ್ಘಾಟಿಸಿ ಶುಭಹಾರೈಸಿದರು, ರೆಡ್ ಕ್ರಾಸ್ ರಕ್ತನಿಧಿಯ ಅಧಿಕಾರಿ ಪ್ರವೀಣ್ ಕುಮಾರ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂತೋಷ್, ಆಸ್ಪತ್ರೆಯ ಪ್ರಯೋಗಾಲಯ ಅಧಿಕಾರಿ ಶಿತಿಕಂಠ ಭಟ್, , ಎನ್ ಯಸ್ ಯಸ್ ಯೋಜನಾಧಿಕಾರಿ ಪ್ರಕಾಶ್ ಗೌಡ, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ ಉಪಸ್ಥಿತರಿದ್ದರು. ಒಟ್ಟು 107 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Related posts

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya
error: Content is protected !!