23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌( ರಿ ) ಬೆಳ್ತಂಗಡಿ ವಲಯ, ಪೂರ್ಣನಂದ ‌ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಮತ್ತು ಮಹಿಳಾ ಸಂಘ ಬೆಳ್ತಂಗಡಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಆ. 25 ರಂದು ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದ ರಾಧಾಕೃಷ್ಣ ಸಭಾಭವನದಲ್ಲಿ ಪುರೋಹಿತರಾದ ಪ್ರಭಾಕರ ಭಟ್ ಇಡ್ಯಾ ಇವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಸಮಾಜದ ಮಾತೆಯರು ಮತ್ತು ಆಸ್ತಿಕ ಬಾಂಧವರು ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವರಮಹಾಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾದರು. ಕಾರ್ಯಕ್ರಮದಲ್ಲಿ ನಮ್ಮ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ -3 ನ್ನು ಯಶಸ್ವಿಯಾಗಿ ಪೂರೈಸಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಂ ಲ್ಯಾಂಡರ್ ಇಳಿಸಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಪಾತ್ರವಾಗಿದ್ದು ಇಸ್ರೋ ಸಂಸ್ಥೆ ಯನ್ನು ಪ್ರಚಂಡ ಕರತಾಡನದ ಮೂಲಕ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಪೂರ್ವಧ್ಯಕ್ಷರಾದ ದಯಾನಂದ ನಾಯಕ್, ಪೂರ್ವ ಕಾರ್ಯದರ್ಶಿ ಸುಧಾಕರ ಪ್ರಭು ಪೆರ್ಮರೋಡಿ, ಕಾರ್ಯದರ್ಶಿ ಧನಂಜಯ ನಾಯಕ್ ವೇಣೂರು, ಮಹಿಳಾ ಸಂಘದ ಕಾರ್ಯದರ್ಶಿ ಕಸ್ತೂರಿ ಪ್ರಭು ನಾನಾಡಿ, ಪೂರ್ವಧ್ಯಕ್ಷರು, ಸಮಾಜದ ಹಿರಿಯರು, ಮಾತೆಯರು ಮತ್ತು ಮಕ್ಕಳು ಭಾಗವಹಿಸಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya
error: Content is protected !!