ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ 2023 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧ.ಮಂ ಶಿಕ್ಷಣ ಸಂಸ್ಥೆ ಉಜಿರೆ ಇದರ ಕಾರ್ಯದರ್ಶಿಗಳಾದ ಡಾ.ಸತೀಶ್ಚಂದ್ರ ಎಸ್. ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ, ಹೊಸಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಜಗದೀಶ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕರುಣಾಕರ ಪೂಜಾರಿ, ಪಂಚಾಯತ್ ಸದಸ್ಯರಾದ ಪ್ರಕಾಶ್ ದೇವಾಡಿಗ ಶ್ರೀ ಧ.ಮಂ ಶಿಕ್ಷಣ ಸಂಸ್ಥೆ(ರಿ), ಉಜಿರೆ ಇದರ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸೋಮಶೇಖರ ಶೆಟ್ಟಿ, ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ, ಸಿಆರ್‌ಪಿ ಶ್ರೀಮತಿ ಆರತಿ, ಕರ್ನಾಟಕ ರಾಜ್ಯ ಸಹಶಿಕ್ಷಕ ಸಂಘ ಬೆಳ್ತಂಗಡಿ ತಾಲೂಕು ಘಟಕದ ಉಪಾಧ್ಯಕ್ಷರಾದ ಗೋಪಾಲಕೃಷ್ಣ ತುಳುಮುಳೆ ಇವರು ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಮುಕುಂದಚಂದ್ರ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕರಾದ ಹರಿಪ್ರಸಾದ ಪಿ ಧನ್ಯವಾದವಿತ್ತರು. ಕನ್ನಡ ಭಾಷಾ ಸಹಾಯಕಿ ಶ್ರೀಮತಿ ಜಯಂತಿ ಎಮ್ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!