23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

ಉಜಿರೆ: ಯುವ ವಿದ್ಯಾರ್ಥಿ ಸಮುದಾಯವು ಉತ್ತಮ ಅವಕಾಶಗಳನ್ನು ಬಳಸಿಕೊಂಡು ಸಮರ್ಥರಾಗಬೇಕು. ಶಿಕ್ಷಣದೊಂದಿಗೆ ಜ್ಞಾನ ಹಾಗೂ ಮೌಲ್ಯಗಳು ಅತಿ ಅಗತ್ಯವಾಗಿವೆ. ಯುವಕರು ಧೈರ್ಯ ಹಾಗೂ ಶಕ್ತಿಗಳನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಒಟ್ಟಾರೆ ಸ್ವಸ್ಥ ಸಮಾಜದ ನಿರ್ಮಾಣ ಯುವ ಸಮುದಾಯದಿಂದ ಸಾಧ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಲಾ ಕೇಂದ್ರದ ನಿರ್ದೇಶಕಿ ಸೋನಿಯಾ ವರ್ಮಾ ಹೇಳಿದರು.
ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಹಾಗೂ ರೇಂಜರ್ಸ್ ಸಹಯೋಗದಲ್ಲಿ ಉಜಿರೆಯ ನೀರಚಿಲುಮೆ ಬಳಿಯ ದ.ಕ.ಜಿ.ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂದು ಪೂರ್ಣ ದಿನದ ಶಿಬಿರ ಉದ್ಘಾಟಸಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಇಂತಹ ಶಿಬಿರಗಳಿಂದ ಶಾಂತಿ , ಸಹಬಾಳ್ವೆ ಹಾಗೂ ಶ್ರಮದ ಮಹತ್ವ ತಿಳಿಯಲು ಸಾಧ್ಯ. ದೇಶದ ಮುಖ್ಯ ವಾಹಿನಿಗೆ ಯುವಕರ ಕೊಡುಗೆ ಅತಿ ಅಗತ್ಯ ಎಂದು ನುಡಿದರು.


ಶಾಲಾಭಿವದ್ಧಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಅವರು ಶ್ರಮದಾನ ಉದ್ಘಾಟಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ , ಶಾಲಾ ಮುಖೋಪಾಧ್ಯಾಯಿನಿ ಸುಜಾತ ರೈ ಶುಭಾಶಂಸನೆ ಮಾಡಿದರು.
ರಾ.ಸೇ ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಪ್ರಾಸ್ತಾವಿಕ ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ರೋವರ್ಸ್ ಹಾಗೂ ರೇಂಜರ್ಸ್ ಇದರ ಉಪನ್ಯಾಸಕ ಲೀಡರ್ಸ್ ಅಂಕಿತಾ ಹಾಗೂ ಲಕ್ಷ್ಮೀಶ ಭಟ್ ಉಪಸ್ಥಿತರಿದ್ದರು.


ಎಸ್.ಡಿ.ಎಂ ಸೊಸೈಟಿಯ ತೃಪ್ತ ಜೈನ್, ಶಿಕ್ಷಕಿ ಅನಸೂಯಾ ಹಾಗೂ ಹಿರಿಯ ಸ್ವಯಂ ಸೇವಕ ವಿದ್ಯಾರ್ಥಿ ಶಶಿಧರ ಉಪಸ್ಥಿತರಿದ್ದರು.
ಪಲ್ಲವಿ ಸ್ವಾಗತಿಸಿ , ದಕ್ಷಾ ವಂದಿಸಿದರು. ಮಹಾಲಕ್ಷ್ಮೀ ನಿರೂಪಿಸಿದರು.

Related posts

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97 ಫಲಿತಾಂಶ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya
error: Content is protected !!