22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ವಾರ್ಷಿಕ ಮಹಾಸಭೆಯು ಸೊಸೈಟಿಯ ಸಭಾಂಗಣದಲ್ಲಿ ಆ. 26 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಪೆರ್ನಾಂಡೀಸ್ ವಹಿಸಿದ್ದರು.

ವೇದಿಕೆಯಲ್ಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ನರೇಂದ್ರ ಕುಮಾರ್, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ‌ಕುಮಾರ್ ಕೆ.ವೈ, ಪದ್ಮನಾಭ ನಾಯ್ಕ ಸಿಸಿ, ಕೃಷ್ಣಪ್ಪ ಪೂಜಾರಿ,ಉಮೇಶ, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸಂದೇಶ ಉಪಸ್ಥಿತರಿದ್ದರು.

ವಾರ್ಷಿಕ ಮಹಾಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿ ಆಯ್ಕೆಯಾದ ಹರೀಶ್ ಪೂಂಜರವರನ್ನು ಸಿಎ ಬ್ಯಾಂಕ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಪಡಂಗಡಿ ಗ್ರಾ.ಪಂ ನೂತನ ಅಧ್ಯಕ್ಷ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷೆ ವಸಂತಿ,ನಿವೃತ್ತ ಅಂಚೆ ಪಾಲಕ ಪೂವಪ್ಪ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಹಾಗೂ ಉತ್ತಮ ಅಂಕಗಳಿಸಿದ ಸ್ಥಳೀಯ ಶಾಲಾ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೂ ಸ್ಥಳೀಯ ಶಾಲೆಯ ಗ್ರಂಥಾಲಯದ ಪುಸ್ತಕ ಜೋಡನೆಗೆ ಸಹಕಾರ ನೀಡಿದರು.

ಪಡಂಗಡಿ ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ ವಾರ್ಷಿಕ ವರದಿಯನ್ನು ಸಭೆಯ ಮುಂದಿಟ್ಟರು. ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ಸರ್ವ ಸದಸ್ಯರು ಸಹಕರಿಸಿದರು. ಶಿಕ್ಷಕ ಶಿವಶಂಕರ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿಗಳಾದ ಸುಜಯ, ಉಮೇಶ್, ಆನಂದ, ರಂಜಿತ್ ಸಹಕರಿಸಿದರು. ನಿರ್ದೇಶಕ ರವಿಕುಮಾರ್ ಕೆ.ವೈ ವಂದಿಸಿದರು.

ಚಿತ್ರ: ನರ್ಮದ ಸ್ಟುಡಿಯೋ ವೇಣೂರು

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!