23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ವಾರ್ಷಿಕ ಮಹಾಸಭೆಯು ಸೊಸೈಟಿಯ ಸಭಾಂಗಣದಲ್ಲಿ ಆ. 26 ರಂದು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ ಪೆರ್ನಾಂಡೀಸ್ ವಹಿಸಿದ್ದರು.

ವೇದಿಕೆಯಲ್ಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ನರೇಂದ್ರ ಕುಮಾರ್, ನಿರ್ದೇಶಕರಾದ ನಾರಾಯಣ ಮೂಲ್ಯ, ಸಂತೋಷ್ ಶೆಟ್ಟಿ, ರವಿ‌ಕುಮಾರ್ ಕೆ.ವೈ, ಪದ್ಮನಾಭ ನಾಯ್ಕ ಸಿಸಿ, ಕೃಷ್ಣಪ್ಪ ಪೂಜಾರಿ,ಉಮೇಶ, ಉಷಾ, ಸುನಂದ, ನವೀನ್, ವಲಯ ಮೇಲ್ವಿಚಾರಕ ಸಂದೇಶ ಉಪಸ್ಥಿತರಿದ್ದರು.

ವಾರ್ಷಿಕ ಮಹಾಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಭಾರಿ ಆಯ್ಕೆಯಾದ ಹರೀಶ್ ಪೂಂಜರವರನ್ನು ಸಿಎ ಬ್ಯಾಂಕ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಪಡಂಗಡಿ ಗ್ರಾ.ಪಂ ನೂತನ ಅಧ್ಯಕ್ಷ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷೆ ವಸಂತಿ,ನಿವೃತ್ತ ಅಂಚೆ ಪಾಲಕ ಪೂವಪ್ಪ ಪೂಜಾರಿಯವರನ್ನು ಸನ್ಮಾನಿಸಲಾಯಿತು. ಹಾಗೂ ಉತ್ತಮ ಅಂಕಗಳಿಸಿದ ಸ್ಥಳೀಯ ಶಾಲಾ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೂ ಸ್ಥಳೀಯ ಶಾಲೆಯ ಗ್ರಂಥಾಲಯದ ಪುಸ್ತಕ ಜೋಡನೆಗೆ ಸಹಕಾರ ನೀಡಿದರು.

ಪಡಂಗಡಿ ಸಿಎ ಬ್ಯಾಂಕ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ ವಾರ್ಷಿಕ ವರದಿಯನ್ನು ಸಭೆಯ ಮುಂದಿಟ್ಟರು. ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್ ಸ್ವಾಗತಿಸಿದರು. ಸರ್ವ ಸದಸ್ಯರು ಸಹಕರಿಸಿದರು. ಶಿಕ್ಷಕ ಶಿವಶಂಕರ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಬ್ಬಂದಿಗಳಾದ ಸುಜಯ, ಉಮೇಶ್, ಆನಂದ, ರಂಜಿತ್ ಸಹಕರಿಸಿದರು. ನಿರ್ದೇಶಕ ರವಿಕುಮಾರ್ ಕೆ.ವೈ ವಂದಿಸಿದರು.

ಚಿತ್ರ: ನರ್ಮದ ಸ್ಟುಡಿಯೋ ವೇಣೂರು

Related posts

ಬೆಳ್ತಂಗಡಿಯಲ್ಲಿ ಹೊಸ ಪ್ರಯತ್ನವೊಂದಕ್ಕೆ ಹೆಜ್ಜೆ, ಬೆಳ್ತಂಗಡಿ ನೈಟ್ಸ್ – 2025 , ಫುಡ್ ಫೆಸ್ಟಿವಲ್ ಮತ್ತು ಮ್ಯೂಸಿಕಲ್ ನೈಟ್

Suddi Udaya

ಕೊಕ್ರಾಡಿ -ಸಾವ್ಯ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!