23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೋಮಂತಡ್ಕ ಸೇರಿದಂತೆ ವಿವಿಧೆಡೆ ಇತ್ತಿಚೇಗೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.


ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ (50ವ) ಬಂಧಿತ ಆರೋಪಿಯಾಗಿದ್ದಾನೆ.
ಈತ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟಿಯೊಂದನ್ನು ಕಳ್ಳತನಗೈದು ಅದರಲ್ಲಿ ಸುತ್ತಾಡುತ್ತಾ ಒಬ್ಬಂಟಿಯಾಗಿ ರಾತ್ರಿವೇಳೆ ಹಲವೆಡೆ ಕಳ್ಳತನ ಕೃತ್ಯವೆಸಗುತ್ತಿದ್ದನೆಂದು ತನಿಖೆಯಿಂದ ದೃಢಪಟ್ಟಿದೆ. ಇದೇ ಆ.9 ರಂದು ಸೋಮಂತಡ್ಕ ಪೇಟೆಯ ಪ್ರಸನ್ನ ಪ್ರಾವಿಜನ್ ಸ್ಟೋರ್‌ನ ಬಾಗಿಲು ಮುರಿದು ಡ್ರಾವರ್ ನಲ್ಲಿಟ್ಟಿದ್ದ 50 ಸಾವಿರ ರೂ ನಗದು ಕಳ್ಳತನ ಗೈದಿರುವ ಬಗ್ಗೆ ಮಾಲಕ ಪ್ರಸನ್ನ ಆರಿಗ ಅವರು ಠಾಣೆಗೆ ನೀಡಿದ್ದರು.


ಧರ್ಮಸ್ಥಳ ಎಸ್.ಐ ಅನಿಲ್‌ಕುಮಾರ್ ಡಿ, ಸಮರ್ಥ ಗಾಣಿಗೇರ್, ಲೋಲಾಕ್ಷ ಪಿ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸ್ಯಾಮುವೆಲ್, ರಾಜೇಶ್, ಪ್ರಶಾಂತ, ಶೇಖರ್, ಸತೀಶ ನಾಯ್ಕ ಜಿ, ಶಶಿಧರ, ಮಂಜುನಾಥ, ಧರ್ಮಪಾಲ್, ಅಸ್ಲಾಂ, ಕೃಷ್ಣಪ್ಪ, ಪ್ರಮೋದಿನಿ, ಮಲ್ಲಿಕಾರ್ಜುನ, ಅಭಿಜಿತ್, ಮೆಹಬೂಬ್, ನಾಗರಾಜ ಬುಡ್ರಿ, ದೀಪು, ಮಧು, ಹರೀಶ್, ಜಗದೀಶ್ ಇವರುಗಳನ್ನೊಳಗೊಂಡ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.


ಆರೋಪಿಯ ವಿರುದ್ದ ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವ, ಹಿರಿಯಡಕ, ಪಡುಬಿದ್ರಿ, ಮುಲ್ಕಿ, ಹೆಬ್ರಿ, ಉಡುಪಿ ನಗರ, ದಾವಣಗೆರೆ ಗ್ರಾಮಾಂತರ ಮತ್ತು ಬೆಳಗಾಂ ಮಾರ್ಕೆಟ್ ಪೊಲೀಸ್ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಾಗಿವೆ. ಬಂಧಿತನಿಂದ 20,220 ರೂ. ನಗದು, ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಅದರ ಮೌಲ್ಯ 25ಸಾವಿರ ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ಕೃತ್ಯ ಸ್ಥಳಗೈದ ಸ್ಥಳಗಳಿಗೆ ಕರೆದೊಯ್ದು ಮಹಜರು ನಡೆಸಲಾಗಿದೆ.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya
error: Content is protected !!