ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

Updated on:

ಗುರುವಾಯನಕೆರೆ: ಶ್ರೀ ಶಾರದಾಂಭ ಭಜನಾ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ ವರ್ಷ೦ಪ್ರತಿಯಂತೆ ಜರಗುವ ಈ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.25 ರಂದು ಶಾರದಾ ಕಲಾ ಮಂಟಪ ಶಾರದಾ ನಗರ ಗುರುವಾಯನಕೆರೆಯಲ್ಲಿ ಜರುಗಿತು.


ಕುತ್ಯಾರು ದಯಾಕರ್ ಭಟ್ ಇವರ ಪೌರೋಹಿತ್ಯದಲ್ಲಿ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಜರುಗಿತು.

ಸಂಜೆ 6ರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ದಯಾಕರ್ ಭಟ್ ಇವರು ವರಮಹಾಲಕ್ಷ್ಮೀ ಪೂಜೆಯ ಮಹತ್ವದ ಬಗ್ಗೆ ಸವಿವರಾಗಿ ತಿಳಿಸಿದರು. ನಂತರ ರಕ್ಷಾ ಬಂಧನ, ಹಾಗೂ ಮಹಾ ಪೂಜೆ, ನಂತರ ಪ್ರಸಾದ ವಿತರಣೆ ಕಾರ್ಯಕ್ರಮ ಜರುಗಿತು.


ಕಾರ್ಯಕ್ರಮದಲ್ಲಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು, ಸದಸ್ಯರು, ಊರಿನ ಭಕ್ತಾದಿಗಳು ಭಾಗವಹಿಸಿದ್ದರು. ಸುಧಾಮಣಿ ಕಾರ್ಯಕ್ರಮ ನಿರ್ವಹಿಸಿದರು.

Leave a Comment

error: Content is protected !!