23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

ಉಜಿರೆ: ಮಾಜಿ ಪ್ರಧಾನಮಂತ್ರಿಗಳಾದ ರಾಜೀವ್ ಗಾಂಧಿಯವರ ಜನ್ಮದಿನವನ್ನು ಅವರು ಮಾಡಿದ ಸದ್ಭಾವನೆಯ ಕಾರ್ಯಗಳನ್ನು ನೆನಪಿಸಿಕೊಳ್ಳುವುದಕ್ಕಾಗಿ ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ‘ಸದ್ಭಾವನಾ ದಿವಸ’ವನ್ನು ಆ.25 ರಂದು ಆಚರಿಸಲಾಯಿತು.

ಮುಖ್ಯಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಸಹಪ್ರಾಧ್ಯಾಪಕರದ ದಿವಾಕರ್ ಕೊಕ್ಕಡ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಕೃತಿಯ ನಿಯಮ ಮತ್ತು ಭಾರತದ ಜನಸಂಖ್ಯೆಯ ಬಗ್ಗೆ , ಸಂಪನ್ಮೂಲ ಮತ್ತು ಮಾನವ ಸಂಪನ್ಮೂಲಗಳ ಬಗ್ಗೆ ಮಾತನಾಡಿದರು. ದೇಶ ಬೆಳವಣಿಗೆಯ ಪಥದಲ್ಲಿ ನಡೆಯಬೇಕಾದರೆ ಭಾರತೀಯರ ನಡವಳಿಕೆ ಹೇಗಿರಬೇಕೆಂದು ಎಳೆ ಎಳೆಯಾಗಿ ಮಾಹಿತಿ ನೀಡಿದರು. ಯಾವುದೇ ಜಾತಿ ಕನಿಷ್ಠವಲ್ಲ ಯಾವುದೇ ಜಾತಿ ಶ್ರೇಷ್ಠವಲ್ಲ, ವೃತ್ತಿಗನುಸಾರವಾಗಿ ಜಾತಿ ಎಂದು ಅರಿವು ಮೂಡಿಸಿದರು. ಕುವೆಂಪುರವರ ಉತ್ತಮ ಕವಿತೆಗಳನ್ನು ಜ್ಞಾಪಿಸಿಕೊಂಡರು. ನಮ್ಮಲ್ಲಿ ಕೆಟ್ಟ ಕೆಲಸಗಳು ನಾಶವಾಗಲಿ ಪರಿಸರವನ್ನು ಬೆಳೆಸುವ ಸೌಹಾರ್ದತೆ ಎಲ್ಲರಲ್ಲಿಯೂ ಬೆಳೆಯಲಿ ಎಂದು ಎಲ್ಲರಿಗೂ ಕರೆ ನೀಡಿದರು.

ಎಸ್ ಡಿ ಎಮ್ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ರೋವರ್ ಸ್ಕೌಟ್ ಲೀಡರ್ ಆಗಿರುವ ಪ್ರಸಾದ್ ಕುಮಾರ್ ಜೈನ್ ಮತ್ತು ರೇಂಜರ್ಸ್ ಲೀಡರ್ ಗಾನವಿ .ಡಿ.ಜೈನ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಂಯೋಜಕ ಶಶಾಂಕ್ ಬಿಜೆ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕಿ ಪುಣ್ಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ರೋವರ್ಸ್ ಸ್ಕೌಟ್ಸ್ ಲೀಡರ್ ಪ್ರಸಾದ್ ಕುಮಾರ್ ಜೈನ್ ವಂದಿಸಿದರು.

Related posts

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಚ್ಚಿನ ಪ್ರಾ.ಕೃ.ಪ.ಸ. ಸಂಘದ ನೂತನ ಕಟ್ಟಡಕ್ಕೆ ರೂ.7 ಲಕ್ಷ ಚೆಕ್ ಹಸ್ತಾಂತರ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!