22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌( ರಿ ) ಬೆಳ್ತಂಗಡಿ ವಲಯ, ಪೂರ್ಣನಂದ ‌ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಮತ್ತು ಮಹಿಳಾ ಸಂಘ ಬೆಳ್ತಂಗಡಿ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಆ. 25 ರಂದು ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದ ರಾಧಾಕೃಷ್ಣ ಸಭಾಭವನದಲ್ಲಿ ಪುರೋಹಿತರಾದ ಪ್ರಭಾಕರ ಭಟ್ ಇಡ್ಯಾ ಇವರ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಸಮಾಜದ ಮಾತೆಯರು ಮತ್ತು ಆಸ್ತಿಕ ಬಾಂಧವರು ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ವರಮಹಾಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾದರು. ಕಾರ್ಯಕ್ರಮದಲ್ಲಿ ನಮ್ಮ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ -3 ನ್ನು ಯಶಸ್ವಿಯಾಗಿ ಪೂರೈಸಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಂ ಲ್ಯಾಂಡರ್ ಇಳಿಸಿದ್ದು, ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವೆಂಬ ಹೆಗ್ಗಳಿಕೆ ಪಾತ್ರವಾಗಿದ್ದು ಇಸ್ರೋ ಸಂಸ್ಥೆ ಯನ್ನು ಪ್ರಚಂಡ ಕರತಾಡನದ ಮೂಲಕ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಪೂರ್ವಧ್ಯಕ್ಷರಾದ ದಯಾನಂದ ನಾಯಕ್, ಪೂರ್ವ ಕಾರ್ಯದರ್ಶಿ ಸುಧಾಕರ ಪ್ರಭು ಪೆರ್ಮರೋಡಿ, ಕಾರ್ಯದರ್ಶಿ ಧನಂಜಯ ನಾಯಕ್ ವೇಣೂರು, ಮಹಿಳಾ ಸಂಘದ ಕಾರ್ಯದರ್ಶಿ ಕಸ್ತೂರಿ ಪ್ರಭು ನಾನಾಡಿ, ಪೂರ್ವಧ್ಯಕ್ಷರು, ಸಮಾಜದ ಹಿರಿಯರು, ಮಾತೆಯರು ಮತ್ತು ಮಕ್ಕಳು ಭಾಗವಹಿಸಿದ್ದರು.

Related posts

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya

ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ನಶಾಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!