25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

ಉಜಿರೆ: ಯುವ ವಿದ್ಯಾರ್ಥಿ ಸಮುದಾಯವು ಉತ್ತಮ ಅವಕಾಶಗಳನ್ನು ಬಳಸಿಕೊಂಡು ಸಮರ್ಥರಾಗಬೇಕು. ಶಿಕ್ಷಣದೊಂದಿಗೆ ಜ್ಞಾನ ಹಾಗೂ ಮೌಲ್ಯಗಳು ಅತಿ ಅಗತ್ಯವಾಗಿವೆ. ಯುವಕರು ಧೈರ್ಯ ಹಾಗೂ ಶಕ್ತಿಗಳನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಒಟ್ಟಾರೆ ಸ್ವಸ್ಥ ಸಮಾಜದ ನಿರ್ಮಾಣ ಯುವ ಸಮುದಾಯದಿಂದ ಸಾಧ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಲಾ ಕೇಂದ್ರದ ನಿರ್ದೇಶಕಿ ಸೋನಿಯಾ ವರ್ಮಾ ಹೇಳಿದರು.
ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಹಾಗೂ ರೇಂಜರ್ಸ್ ಸಹಯೋಗದಲ್ಲಿ ಉಜಿರೆಯ ನೀರಚಿಲುಮೆ ಬಳಿಯ ದ.ಕ.ಜಿ.ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂದು ಪೂರ್ಣ ದಿನದ ಶಿಬಿರ ಉದ್ಘಾಟಸಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಇಂತಹ ಶಿಬಿರಗಳಿಂದ ಶಾಂತಿ , ಸಹಬಾಳ್ವೆ ಹಾಗೂ ಶ್ರಮದ ಮಹತ್ವ ತಿಳಿಯಲು ಸಾಧ್ಯ. ದೇಶದ ಮುಖ್ಯ ವಾಹಿನಿಗೆ ಯುವಕರ ಕೊಡುಗೆ ಅತಿ ಅಗತ್ಯ ಎಂದು ನುಡಿದರು.


ಶಾಲಾಭಿವದ್ಧಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಅವರು ಶ್ರಮದಾನ ಉದ್ಘಾಟಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ , ಶಾಲಾ ಮುಖೋಪಾಧ್ಯಾಯಿನಿ ಸುಜಾತ ರೈ ಶುಭಾಶಂಸನೆ ಮಾಡಿದರು.
ರಾ.ಸೇ ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಪ್ರಾಸ್ತಾವಿಕ ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ರೋವರ್ಸ್ ಹಾಗೂ ರೇಂಜರ್ಸ್ ಇದರ ಉಪನ್ಯಾಸಕ ಲೀಡರ್ಸ್ ಅಂಕಿತಾ ಹಾಗೂ ಲಕ್ಷ್ಮೀಶ ಭಟ್ ಉಪಸ್ಥಿತರಿದ್ದರು.


ಎಸ್.ಡಿ.ಎಂ ಸೊಸೈಟಿಯ ತೃಪ್ತ ಜೈನ್, ಶಿಕ್ಷಕಿ ಅನಸೂಯಾ ಹಾಗೂ ಹಿರಿಯ ಸ್ವಯಂ ಸೇವಕ ವಿದ್ಯಾರ್ಥಿ ಶಶಿಧರ ಉಪಸ್ಥಿತರಿದ್ದರು.
ಪಲ್ಲವಿ ಸ್ವಾಗತಿಸಿ , ದಕ್ಷಾ ವಂದಿಸಿದರು. ಮಹಾಲಕ್ಷ್ಮೀ ನಿರೂಪಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya
error: Content is protected !!