25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

ಉಜಿರೆ: ಯುವ ವಿದ್ಯಾರ್ಥಿ ಸಮುದಾಯವು ಉತ್ತಮ ಅವಕಾಶಗಳನ್ನು ಬಳಸಿಕೊಂಡು ಸಮರ್ಥರಾಗಬೇಕು. ಶಿಕ್ಷಣದೊಂದಿಗೆ ಜ್ಞಾನ ಹಾಗೂ ಮೌಲ್ಯಗಳು ಅತಿ ಅಗತ್ಯವಾಗಿವೆ. ಯುವಕರು ಧೈರ್ಯ ಹಾಗೂ ಶಕ್ತಿಗಳನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಒಟ್ಟಾರೆ ಸ್ವಸ್ಥ ಸಮಾಜದ ನಿರ್ಮಾಣ ಯುವ ಸಮುದಾಯದಿಂದ ಸಾಧ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಲಾ ಕೇಂದ್ರದ ನಿರ್ದೇಶಕಿ ಸೋನಿಯಾ ವರ್ಮಾ ಹೇಳಿದರು.
ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಹಾಗೂ ರೇಂಜರ್ಸ್ ಸಹಯೋಗದಲ್ಲಿ ಉಜಿರೆಯ ನೀರಚಿಲುಮೆ ಬಳಿಯ ದ.ಕ.ಜಿ.ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂದು ಪೂರ್ಣ ದಿನದ ಶಿಬಿರ ಉದ್ಘಾಟಸಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಇಂತಹ ಶಿಬಿರಗಳಿಂದ ಶಾಂತಿ , ಸಹಬಾಳ್ವೆ ಹಾಗೂ ಶ್ರಮದ ಮಹತ್ವ ತಿಳಿಯಲು ಸಾಧ್ಯ. ದೇಶದ ಮುಖ್ಯ ವಾಹಿನಿಗೆ ಯುವಕರ ಕೊಡುಗೆ ಅತಿ ಅಗತ್ಯ ಎಂದು ನುಡಿದರು.


ಶಾಲಾಭಿವದ್ಧಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಅವರು ಶ್ರಮದಾನ ಉದ್ಘಾಟಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ , ಶಾಲಾ ಮುಖೋಪಾಧ್ಯಾಯಿನಿ ಸುಜಾತ ರೈ ಶುಭಾಶಂಸನೆ ಮಾಡಿದರು.
ರಾ.ಸೇ ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಪ್ರಾಸ್ತಾವಿಕ ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ರೋವರ್ಸ್ ಹಾಗೂ ರೇಂಜರ್ಸ್ ಇದರ ಉಪನ್ಯಾಸಕ ಲೀಡರ್ಸ್ ಅಂಕಿತಾ ಹಾಗೂ ಲಕ್ಷ್ಮೀಶ ಭಟ್ ಉಪಸ್ಥಿತರಿದ್ದರು.


ಎಸ್.ಡಿ.ಎಂ ಸೊಸೈಟಿಯ ತೃಪ್ತ ಜೈನ್, ಶಿಕ್ಷಕಿ ಅನಸೂಯಾ ಹಾಗೂ ಹಿರಿಯ ಸ್ವಯಂ ಸೇವಕ ವಿದ್ಯಾರ್ಥಿ ಶಶಿಧರ ಉಪಸ್ಥಿತರಿದ್ದರು.
ಪಲ್ಲವಿ ಸ್ವಾಗತಿಸಿ , ದಕ್ಷಾ ವಂದಿಸಿದರು. ಮಹಾಲಕ್ಷ್ಮೀ ನಿರೂಪಿಸಿದರು.

Related posts

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya
error: Content is protected !!