September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

ಉಜಿರೆ: ಯುವ ವಿದ್ಯಾರ್ಥಿ ಸಮುದಾಯವು ಉತ್ತಮ ಅವಕಾಶಗಳನ್ನು ಬಳಸಿಕೊಂಡು ಸಮರ್ಥರಾಗಬೇಕು. ಶಿಕ್ಷಣದೊಂದಿಗೆ ಜ್ಞಾನ ಹಾಗೂ ಮೌಲ್ಯಗಳು ಅತಿ ಅಗತ್ಯವಾಗಿವೆ. ಯುವಕರು ಧೈರ್ಯ ಹಾಗೂ ಶಕ್ತಿಗಳನ್ನು ಸಮಾಜಮುಖಿ ಕಾರ್ಯಗಳಿಗೆ ಬಳಸಿಕೊಳ್ಳಬೇಕು. ಒಟ್ಟಾರೆ ಸ್ವಸ್ಥ ಸಮಾಜದ ನಿರ್ಮಾಣ ಯುವ ಸಮುದಾಯದಿಂದ ಸಾಧ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಲಾ ಕೇಂದ್ರದ ನಿರ್ದೇಶಕಿ ಸೋನಿಯಾ ವರ್ಮಾ ಹೇಳಿದರು.
ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ ಹಾಗೂ ರೇಂಜರ್ಸ್ ಸಹಯೋಗದಲ್ಲಿ ಉಜಿರೆಯ ನೀರಚಿಲುಮೆ ಬಳಿಯ ದ.ಕ.ಜಿ.ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂದು ಪೂರ್ಣ ದಿನದ ಶಿಬಿರ ಉದ್ಘಾಟಸಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಇಂತಹ ಶಿಬಿರಗಳಿಂದ ಶಾಂತಿ , ಸಹಬಾಳ್ವೆ ಹಾಗೂ ಶ್ರಮದ ಮಹತ್ವ ತಿಳಿಯಲು ಸಾಧ್ಯ. ದೇಶದ ಮುಖ್ಯ ವಾಹಿನಿಗೆ ಯುವಕರ ಕೊಡುಗೆ ಅತಿ ಅಗತ್ಯ ಎಂದು ನುಡಿದರು.


ಶಾಲಾಭಿವದ್ಧಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಅವರು ಶ್ರಮದಾನ ಉದ್ಘಾಟಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ , ಶಾಲಾ ಮುಖೋಪಾಧ್ಯಾಯಿನಿ ಸುಜಾತ ರೈ ಶುಭಾಶಂಸನೆ ಮಾಡಿದರು.
ರಾ.ಸೇ ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಪ್ರಾಸ್ತಾವಿಕ ಮಾತನಾಡಿದರು. ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್, ರೋವರ್ಸ್ ಹಾಗೂ ರೇಂಜರ್ಸ್ ಇದರ ಉಪನ್ಯಾಸಕ ಲೀಡರ್ಸ್ ಅಂಕಿತಾ ಹಾಗೂ ಲಕ್ಷ್ಮೀಶ ಭಟ್ ಉಪಸ್ಥಿತರಿದ್ದರು.


ಎಸ್.ಡಿ.ಎಂ ಸೊಸೈಟಿಯ ತೃಪ್ತ ಜೈನ್, ಶಿಕ್ಷಕಿ ಅನಸೂಯಾ ಹಾಗೂ ಹಿರಿಯ ಸ್ವಯಂ ಸೇವಕ ವಿದ್ಯಾರ್ಥಿ ಶಶಿಧರ ಉಪಸ್ಥಿತರಿದ್ದರು.
ಪಲ್ಲವಿ ಸ್ವಾಗತಿಸಿ , ದಕ್ಷಾ ವಂದಿಸಿದರು. ಮಹಾಲಕ್ಷ್ಮೀ ನಿರೂಪಿಸಿದರು.

Related posts

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya
error: Content is protected !!