September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರು ಸರ್ಕಲ್ ಇದರ ವತಿಯಿಂದ ಆ.25 ರಂದು ಕಿಲ್ಲೂರು ಆಶಿಕ್ ಮನ್ಝಿಲ್ ನಲ್ಲಿ ಸವ೯ಧರ್ಮಿಯರ ಸೌಹಾದ೯ ಒಗ್ಗೂಡುವಿಕೆಯಲ್ಲಿ ಪ್ರಜಾಭಾರತ ಕಾರ್ಯಕ್ರಮ‌ ನಡೆಯಿತು.

ಕಾಜೂರು ಸರ್ಕಲ್ ಅಧ್ಯಕ್ಷ ದಿಡುಪೆ ಮುಹಮ್ಮದ್ ಅಲ ಅಧ್ಯಕ್ಷತೆ ವಹಿಸಿದ್ದರು. ಇಸ್ಮಾಯಿಲ್ ಫೈಝಿ ದುಆ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ತುಂಗಪ್ಪ ಪೂಜಾರಿ ಕಾಜೂರು, ವೀರಪ್ಪ ದೇವಾಡಿಗ ಬಂಗಾಡಿ ತಮ್ಮ ಬಾಲ್ಯ ಕಾಲದ ಸೌಹಾರ್ದದ ಬದುಕನ್ನು ಹಂಚಿಕೊಂಡರು.

ಕಾಜೂರು ದರ್ಗಾ ಶರೀಫ್ ಮುದರ್ರಿಸ್ ತೌಸೀಫ್ ಸ‌ಅದಿ ಹರೇಕಳ ಮುಖ್ಯ ಭಾಷಣ ಮಾಡಿ ಕೋಮು ಸೌಹಾರ್ದತೆಯ ಅನಿವಾರ್ಯತೆಯನ್ನು ತಿಳಿಸಿದರು.

ಕಾಜೂರು ದರ್ಗಾ ಶರೀಫಿನ ಪ್ರಧಾನ ಕಾರ್ಯದರ್ಶಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ಕೋಶಾಧಿಕಾರಿ ಜೆ.ಎಚ್. ಅಬೂಬಕ್ಕರ್ ಸಿದ್ದೀಕ್ ಕಾಜೂರು, ಝೋನ್ ಸದಸ್ಯ ಕೆ.ಪಿ ಮುಹಮ್ಮದ್, ಕಿಲ್ಲೂರು ಮಸೀದಿ ಉಸ್ತುವಾರಿ ಹಂಝತ್, ಕೆ ಮುಹಮ್ಮದ್ ಕಿಲ್ಲೂರು ಹಾಗೂ ಎರ್ಮಾಳ, ಕಿಲ್ಲೂರು, ಪೆರ್ದಾಡಿ, ಕಾಜೂರು ಯುನಿಟ್ ಮತ್ತು ಸರ್ಜಲ್ ಗಳ ಪ್ರಮುಖರು ಪಾಲ್ಗೊಂಡಿದ್ದರು.

Related posts

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ “ಮನೆ ಮನೆಗೆ ಗಂಗಾಜಲ”

Suddi Udaya

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya
error: Content is protected !!