25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರು ಸರ್ಕಲ್ ಇದರ ವತಿಯಿಂದ ಆ.25 ರಂದು ಕಿಲ್ಲೂರು ಆಶಿಕ್ ಮನ್ಝಿಲ್ ನಲ್ಲಿ ಸವ೯ಧರ್ಮಿಯರ ಸೌಹಾದ೯ ಒಗ್ಗೂಡುವಿಕೆಯಲ್ಲಿ ಪ್ರಜಾಭಾರತ ಕಾರ್ಯಕ್ರಮ‌ ನಡೆಯಿತು.

ಕಾಜೂರು ಸರ್ಕಲ್ ಅಧ್ಯಕ್ಷ ದಿಡುಪೆ ಮುಹಮ್ಮದ್ ಅಲ ಅಧ್ಯಕ್ಷತೆ ವಹಿಸಿದ್ದರು. ಇಸ್ಮಾಯಿಲ್ ಫೈಝಿ ದುಆ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಮುಸ್ಲಿಯಾರ್ ಸ್ವಾಗತಿಸಿದರು. ಮುಖ್ಯ ಅತಿಥಿಗಳಾದ ಕೃಷ್ಣಪ್ಪ ಪೂಜಾರಿ ಕಿಲ್ಲೂರು, ತುಂಗಪ್ಪ ಪೂಜಾರಿ ಕಾಜೂರು, ವೀರಪ್ಪ ದೇವಾಡಿಗ ಬಂಗಾಡಿ ತಮ್ಮ ಬಾಲ್ಯ ಕಾಲದ ಸೌಹಾರ್ದದ ಬದುಕನ್ನು ಹಂಚಿಕೊಂಡರು.

ಕಾಜೂರು ದರ್ಗಾ ಶರೀಫ್ ಮುದರ್ರಿಸ್ ತೌಸೀಫ್ ಸ‌ಅದಿ ಹರೇಕಳ ಮುಖ್ಯ ಭಾಷಣ ಮಾಡಿ ಕೋಮು ಸೌಹಾರ್ದತೆಯ ಅನಿವಾರ್ಯತೆಯನ್ನು ತಿಳಿಸಿದರು.

ಕಾಜೂರು ದರ್ಗಾ ಶರೀಫಿನ ಪ್ರಧಾನ ಕಾರ್ಯದರ್ಶಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ಕೋಶಾಧಿಕಾರಿ ಜೆ.ಎಚ್. ಅಬೂಬಕ್ಕರ್ ಸಿದ್ದೀಕ್ ಕಾಜೂರು, ಝೋನ್ ಸದಸ್ಯ ಕೆ.ಪಿ ಮುಹಮ್ಮದ್, ಕಿಲ್ಲೂರು ಮಸೀದಿ ಉಸ್ತುವಾರಿ ಹಂಝತ್, ಕೆ ಮುಹಮ್ಮದ್ ಕಿಲ್ಲೂರು ಹಾಗೂ ಎರ್ಮಾಳ, ಕಿಲ್ಲೂರು, ಪೆರ್ದಾಡಿ, ಕಾಜೂರು ಯುನಿಟ್ ಮತ್ತು ಸರ್ಜಲ್ ಗಳ ಪ್ರಮುಖರು ಪಾಲ್ಗೊಂಡಿದ್ದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಎಸ್.ಡಿ.ಎಂ ಕಾಲೇಜು ಉಜಿರೆ : ಬೃಹತ್ ರಕ್ತದಾನ ಶಿಬಿರ: ದಾಖಲೆಯ 180ಯುನಿಟ್ ರಕ್ತ ಸಂಗ್ರಹ

Suddi Udaya
error: Content is protected !!