25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

ಧರ್ಮಸ್ಥಳ : ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಗದಗ ಮೂಲದ ಯಾತ್ರಾರ್ಥಿಗಳ ಕಾರಿನ ಗಾಜು ಒಡೆದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಗದಗ ಮಾಗಡಿ ಗ್ರಾಮದ ನಿವಾಸಿ ಬಸವರಾಜ ಗುಡಸಲಮನಿ ಎಂಬವರು ಆ.26 ರಂದು ಬೆಳಿಗ್ಗೆ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ತಮ್ಮ ಕಾರಿನಲ್ಲಿ ಬಂದಿದ್ದರು. ಕಾರನ್ನು ಲಾಕ್ ಮಾಡಿ ದೇವಸ್ಥಾನದ ಹತ್ತಿರ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. ಕಳ್ಳರು ಅವರು ದೇವರ ದರ್ಶನಕ್ಕೆ ಹೋಗಿದ್ದ ವೇಳೆ ಕಾರಿನ ಗಾಜನ್ನು ಒಡೆದು ಕಾರಿನ ಒಳಗಿದ್ದ ವ್ಯಾನಿಟಿ ಬ್ಯಾಗ್ ನಲ್ಲಿಟ್ಟಿದ್ದ ರೂ.1.96 ಲಕ್ಷ ಮೌಲ್ಯದ 40 ಗ್ರಾಂ ತೂಕದ ಕರಿಮಣಿ ಸರ ಮತ್ತು ಸುಮಾರು ರೂ. 4 ಸಾವಿರ ಮೌಲ್ಯದ 1 ಮೊಬೈಲ್‌ನ್ನು ಕಳವು ಗೈದಿದ್ದರು.

ಬಸವರಾಜು ಅವರು ದೇವರ ದರ್ಶನ ಮುಗಿಸಿ ಹಿಂತಿರುಗಿದ ವೇಳೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ನ್ನು ಯಾರೋ ಕಳ್ಳರು ಒಡೆದು ಅದರಲ್ಲಿದ್ದ ವಸ್ತುಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!